ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧದ ನೀತಿಯ ಬಗ್ಗೆ ಬಿಜೆಪಿ ನಾಯಕರು ತಿಳಿದಿದ್ದರು ಎಂಬ ಪ್ರತಿಪಕ್ಷಗಳ ಆರೋಪಗಳ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ತಮ್ಮ ಪಕ್ಷದ ಎಲ್ಲ ನಾಯಕರು ನ.8ರಿಂದ ಡಿ.31ರ ವರೆಗಿನ ಬ್ಯಾಂಕ್ ವ್ಯವಹಾರಗಳ ವಿವರಗಳನ್ನು ನೀಡುವಂತೆ ಸೂಚಿಸಿದ್ದಾರೆ.
ಪಕ್ಷದ ಸ್ಥಾನ ಮತ್ತು ಗುರುತಿಸುವಿಕೆಯ ಸ್ಪಷ್ಟ ಸಂದೇಶದೊಂದಿಗೆ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಸರ್ಕಾರದ ಉದ್ದೇಶದಿಂದ ಮೋದಿ ಅವರು ಈ ಸೂಚನೆ ನೀಡಿದ್ದು, ಪಕ್ಷದ ಸಂಸದರು, ಶಾಸಕರು ನ.8ರಿಂದ ಡಿ.31ರ ವರೆಗಿನ ಬ್ಯಾಂಕ್ ವಿವರಗಳನ್ನು ಜನವರಿ 1, 2017ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಸಲ್ಲಿಸುವಂತೆ ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.
ಹೆಚ್ಚಿನ ಮುಖಬೆಲೆಯ ರೂ.500 ಮತ್ತು ರೂ.1000 ನೋಟುಗಳ ನಿಷೇಧ ಹೇರಿಕೆ ಕುರಿತ ಆಯ್ದ ಮಾಹಿತಿಗಳ ಸೋರಿಕೆಯಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿದ್ದು, ಅವರ ಬಾಯಿ ಮುಚ್ಚಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.
ಬಿಜೆಪಿ ಪಕ್ಷದ ಸಂಸದೀಯ ಸಭೆಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಅವರು, ರೇಸ್ ಕೋರ್ಸ್ ರೋಡ್ಗೆ ಲೋಕ ಕಲ್ಯಾಣ ಮಾರ್ಗ್ ಎಂದು ಮರುನಾಮಕರಣ ಮಾಡಲಾಗಿದ್ದು, ಈಗ ‘ಗರೀಬ್ ಕಲ್ಯಾಣ್’ (ಬಡವರ ಕಲ್ಯಾಣ)ದ ಕಡೆಗೆ ಗಮನ ಹರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಹೊಸದಾಗಿ ಆರಂಭಿಸಲಾದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಸಂಗ್ರಹಿಸಲಾದ ನಿಧಿಯನ್ನು ಮೂಲಭೂತ ಅಗತ್ಯತೆಗಳಾದ ನೀರು, ವಿದ್ಯುತ್, ಆರೋಗ್ಯ ಮತ್ತು ಶಿಕ್ಷಣಕೆ ಬಳಸಲಾಗುವುದು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.