ನವದೆಹಲಿ: ಅಣಾಣ್ಯೀಕರಣದ ಬಳಿಕ ಕೇಂದ್ರ ಸರ್ಕಾರ ಡಿಜಿಟಲ್ ಪೇಮೆಂಟ್ಗೆ ಪ್ರೋತ್ಸಾಹಿಸುತ್ತಿದ್ದು, ಇನ್ನು ಮುಂದೆ ನಗದು ರಹಿತ ಪಾವತಿಗೆ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಅಲ್ಲದೇ ಆಧಾರ್ ಮತ್ತು ಮೊಬೈಲ್ ಸಂಖ್ಯೆ ಆಧಾರಿತ ಪಾವತಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದೆ.
ಭಾರತದ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ನಗದು ರಹಿತ ಆರ್ಥಿಕತೆ ಪ್ರೋತ್ಸಾಹಿಸಲು ಬಯೋಮೆಟ್ರಿಕ್ ದೃಢೀಕರಣ ಸಾಮರ್ಥ್ಯವನ್ನು ಪ್ರತಿ ದಿನಕ್ಕೆ 10 ಕೋಟಿಯಿಂದ 40 ಕೋಟಿಗೆ ಹೆಚ್ಚಿಸಲು ಯೋಜಿಸಿದೆ.
ಗ್ರಾಹಕರು ವ್ಯಾಪಾರಸ್ಥರಲ್ಲಿ ವ್ಯವಹರಿಸಲು ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಪಆಸ್ವರ್ಡ್ ಹೊರತು ಪಡಿಸಿ ಆಧಾರ್ ಸಂಖ್ಯೆ ಆಧಾರಿತ ಪಾವತಿ ಮಾಡಬಹುದು. ಇದಕ್ಕಾಗಿ ಕೇಂದ್ರ ಸರ್ಕಾರ ಮೊಬೈಲ್ ಫೋನ್ ಆಪ್ ರೂಪಿಸುತ್ತಿದ್ದು, ಇದನ್ನು ಬಯೋಮೆಟ್ರಿಕ್ ದೃಢೀಕರಿಸಲು ಬಳಸಲಾಗುವುದು.
ಜನರು ತಮ್ಮ ಆಧಾರ್ ಸಂಖ್ಯೆಗಳನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡುವ ಮೂಲಕ ಹಣ ವರ್ಗಾವಣೆ, ಬ್ಯಾಲೆನ್ಸ್ ವಿಚಾರಣೆ, ಹಣ ಠೇವಣಿ ಮತ್ತು ವಿತ್ಡ್ರಾವಲ್ ಮತ್ತು ಅಂತರ್- ಬ್ಯಾಂಕಿಂಗ್ ವ್ಯವಹಾರಗಳನ್ನು ನಿರ್ವಹಿಸಬಹುದು ಎಂದು ಯುಐಡಿಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ.
ಆಧಾರ್ ಆಧಾರಿತ ಪಾವತಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಲಾಗುವುದು. ಈ ಉಪಕ್ರಮ ಕಪ್ಪು ಹಣ ತಡೆ ಮತ್ತು ಆರ್ಥಿಕ ವ್ಯವಹಾರಗಳಲ್ಲಿ ಪಾರದರ್ಶಕತೆ ತರಲು ಸರ್ಕಾರಕ್ಕೆ ಸಹಾಯಕವಾಗಲಿದೆ. ಈಗಾಗಲೇ 1.08 ಕೋಟಿ ಜನರಿಗೆ ಆಧಾರ್ ನೀಡಲಾಗಿದೆ ಎಂದು ಪಾಂಡೆ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.