ಚೆನ್ನೈ: ಹೃದಯಾಘಾತದಿಂದ ಮಂಗಳವಾರ ವಿಧಿವಶರಾದ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಪಾರ್ಥಿವ ಶರೀರವನ್ನು ರಾಜಾಜಿ ಹಾಲ್ನಲ್ಲಿ ಇರಿಸಲಾಗಿದ್ದು, ಸಾವಿರಾರು ಭಕ್ತರು ಅಂತಿಮ ದರ್ಶನ ಪಡೆದಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾವಪೂರ್ಣ ನಮನದೊಂದಿಗೆ ಗೌರವ ಸಲ್ಲಿಸಿದರು.
ಜಯಲಲಿತಾ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ ಅವರು, ಜಯಲಲಿತಾ ಅವರ ಆಪ್ತೆ ಶಶಿಕಲಾ ಮತ್ತು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒ. ಪನ್ನೀರ ಸೆಲ್ವಂ, ಇತರ ಸಚಿವರಿಗೆ ಸಾಂತ್ವನ ನೀಡಿದರು.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಚೆನ್ನೈಗೆ ಆಗಮಿಸುತ್ತಿದ್ದ ಐಎಎಫ್ ವಿಮಾನ ತಾಂತ್ರಿಕ ದೋಷದ ಕಾರಣ ಮತ್ತೆ ದೆಹಲಿಗೆ ಹಿಂದಿರುಗಿದ್ದು, ತಡವಾಗಿ ತಲುಪಲಿದ್ದಾರೆ ಎನ್ನಲಾಗಿದೆ.
ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಅವರು ಕೂಡ ರಾಜಾಜಿ ಹಾಲ್ಗೆ ತೆರಳಿ ಜಯಲಲಿತಾ ಅವರಿಗೆ ಗೌರವ ಸಲ್ಲಿಸಿದರು.
ಇದೇ ವೇಳೆ ಸಿನಿಮಾ ನಟರಾದ ರಜನಿಕಾಂತ್, ಕಮಲ್ ಹಾಸನ್, ತ್ರಿಷಾ, ಗೌತಮಿ, ಸುಹಾಸಿನಿ ಮಣಿರತ್ನಂ ಮತ್ತಿತರರು ಅಂತಿಮ ದರ್ಶನ ಪಡೆದರು.
ಮಂಗಳವಾರ ಸಂಜೆ 4.30ಕ್ಕೆ ಚೆನ್ನೈನ ಮರೀನಾ ಬೀಚ್ನ ಎಂಜಿಆರ್ ಸ್ಮಾರಕದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.