ದೀಸಾ: ಕೇಂದ್ರ ಸರ್ಕಾರದ ನೋಟು ನಿಷೇಧದ ಬಗ್ಗೆ ಪ್ರತಿಕ್ರಿಯೆ ಬಯಸಿದ ವಿಪಕ್ಷಗಳು ಸಂಸತ್ನಲ್ಲಿ ಗಳಭೆ ಎಬ್ಬಿಸುತ್ತಿದ್ದು, ಪುನರಾವರ್ತಿತ ಅಡೆತಡೆಗಳು ಉಂಟು ಮಾಡುತ್ತಿದ್ದಾರೆ ಎಂದ ತೀವ್ರ ತರಾಟೆಗೆ ತೆಗೆದುಕೊಂಡ ಪ್ರಧಾನಿನರೇಂದ್ರ ಮೋದಿ ಅವರು, ಲೋಕಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಆದ್ದರಿಂದ ಜನಸಭೆಯಲ್ಲಿ ಮಾತನಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಗುಜರಾತ್ನ ಬನಸ್ಕಾಂತದ ದೀಸಾದಲ್ಲಿ ಶನಿವಾರ ರೈತರ ರ್ಯಾಲಿಯನ್ನು ಉದ್ದೇಶಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಅವರು, ಲೋಕಸಭೆಯಲ್ಲಿ ನಡೆದ ಬಿಕ್ಕಟ್ಟಿನ ಬಗ್ಗೆ ಉತ್ತಮ ರಾಜಕೀಯ ಅನುಭವ ಹೊಂದಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುಜರಾತ್ನ ದೀಸಾದಲ್ಲಿ ಅಮುಲ್ ಕಂಪೆನಿಯ ಡೈರಿ ಉದ್ಘಾಟಿಸಿದ ಪ್ರಧಾನಿ ಮೋದಿ ಅವರು ‘ನಾವು ಚರ್ಚೆಗೆ ಸಿದ್ಧರಿದ್ದೇವೆ ಎಂದು ಸರ್ಕಾರ ಹಲವು ಬಾರಿ ಹೇಳೀದೆ. ನನಗೆ ಲೋಕಸಭೆಯಲ್ಲಿ ಮಾತನಾಡು ಅವಕಾಶ ನೀಡಲಿಲ್ಲ. ಆದ್ದರಿಂದ ನಾನು ಜನಸಭೆಯಲ್ಲಿ ಮಾತನಾಡುತ್ತಿದ್ದೇನೆ.
ನವೆಂಬರ್ 8ರ ನೋಟು ನಿಷೇಧದ ತನಕ ಜನರು 500 ಮತ್ತು 1000 ರೂ. ಮುಖಬೆಲೆಯ ನೋಟುಗಳ ಬಗ್ಗೆ ಕಾಳಜಿ ವಹಿಸುತ್ತಿದ್ದರು. ಜನರು ಕಡಿಮೆ ಮುಖಬೆಲೆ ನೋಟುಗಳ ಬಗ್ಗೆ ಕಾಳಜಿ ವಹಿಸುತ್ತಿರಲಿಲ್ಲ. ಅನಾಣ್ಯೀಕರಣದಿಂದ ಕಪ್ಪು ಹಣ, ಭ್ರಷ್ಟಾಚಾರ ಮತ್ತು ನಕಲಿ ನೋಟುಗಳ ನಿರ್ಮೂಲನೆಗೆ ಸಹಾಯಕವಾಗಿದೆ. ಈ ನಿರ್ಧಾರವನ್ನು ದೇಶದ ಜನತೆ ಸ್ವಾಗತಿಸಿದೆ. ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಈವರೆಗೆ ಜನಸಾಮಾನ್ಯರು ಸಮಸ್ಯೆ ಎದುರಿಸುತ್ತಿದ್ದು, ಈಗ ಕಾಳಧನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಅಂತೆಯೇ ನೀವು ನನ್ನನ್ನು ವಿರೋಧಿಸಿದರೂ, ಜನರಿಗೆ ಬ್ಯಾಂಕಿಂಗ್ ಮತ್ತು ತಂತ್ರಜ್ಞಾನ ಬಳಸಿ ಹಣಕಾಸು ವ್ಯವಹಾರ ನಡೆಸಲು ಮಾಹಿತಿ, ಮಾರ್ಗದರ್ಶನ ನೀಡಿ ಎಂದು ಮೋದಿ ಹೇಳಿದ್ದಾರೆ.
ಭಾರತ ಪ್ರಗತಿಯನ್ನು ಬಯಸಿದೆ. ಭ್ರಷ್ಟಾಚಾರ ಮತ್ತು ಕಪ್ಪು ಹಣ ಪ್ರಗತಿಯನ್ನು ನಿಧಾನಗೊಳಿಸುತ್ತಿದೆ. ಇದು ಬಡವರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಈ ಅನಿಷ್ಟ ಕಾರ್ಯಗಳನ್ಜು ಕೊನೆಗೊಳಿಸಬೇಕಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.