ನವದೆಹಲಿ: ಭಾರತ ಮತ್ತು ಇಂಡೋನೇಷ್ಯಾ ಜಂಟಿಯಾಗಿ ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧ ನಿಗ್ರಹಿಸಲು ಜಂಟಿಯಾಗಿ ಸುರಕ್ಷತೆ ಮತ್ತು ಭದ್ರತಾ ಸಂಬಂಧಗಳಿಗೆ ಆದ್ಯತೆ ನೀಡಲು ಒಪ್ಪಿಕೊಂಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ.
ಹೈದರಾಬಾದ್ ಹೌಸ್ನಲ್ಲಿ ಪ್ರಧಾನಿ ಮೋದಿ ಹಾಗೂ ಭಾರತ ಭೇಟಿಯಲ್ಲಿರುವ ಇಂಡೋನೇಷ್ಯಾ ಅಧ್ಯಕ್ಷ ಜೋಕೋ ವಿಡೋಡೊ ಅವರ ಮಾಧ್ಯಮಗಳ ಜೊತೆಗಿನ ಜಂಟಿ ಮಾತುಕತೆ ವೇಳೆ ಎರಡೂ ರಾಷ್ಟ್ರಗಳು ಪ್ರಜಾಪ್ರಭುತ್ವ, ವೈವಿಧ್ಯತೆ ಮತ್ತು ಸಾಮಾಜಿಕ ಸಾಮರಸ್ಯದ ಮೌಲ್ಯಗಳನ್ನು ಹಂಚಿಕೊಳ್ಳುತ್ತಿದ್ದು, ವ್ಯಾಪಾರ ಮತ್ತು ಸಂಸ್ಕೃತಿಯ ಸಂಬಂಧಗಳನ್ನು ಪಾಲಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂಡೋನೇಷ್ಯಾ ಆ್ಯಕ್ಟ್ ಈಸ್ಟ್ ನೀತಿಯ ಪ್ರಮುಖ ಮೌಲ್ಯಯುತ ಪಾಲುದಾರ ರಾಷ್ಟ್ರಗಳಲ್ಲಿ ಒಂದಾಗಿದೆ. ಎರಡೂ ರಾಷ್ಟ್ರಗಳು ತಾಂತ್ರಿಕ ಮತ್ತು ಆರ್ಥಿಕ ಆಸಕ್ತಿಗಳನ್ನು ಹಂಚಕೊಂಡಿದ್ದೇವೆ. ಎರಡೂ ರಾಷ್ಟ್ರಗಳು ಸುರಕ್ಷತೆ ಮತ್ತು ಭದ್ರತಾ ಸಹಕಾರಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಈ ಸಂದರ್ಭಗಳಲ್ಲಿ ಎರಡೂ ರಾಷ್ಟ್ರಗಳು ವಿವಧ ಒಪ್ಪಂದಗಳಿಗೆ ಸಹಿ ಹಾಕಿವೆ.
ಭಯೋತ್ಪಾದನೆ, ಸಂಘಟಿತ ಅಪರಾಧ, ಮಾದಕ ವಸ್ತು ಕಳ್ಳಸಾಗಣೆ, ಅಪಹರಣ ಮುಂತಾದ ಅಪರಾಧಗಳ ನಿಗ್ರಹ ಈ ಮಾತುಕತೆಯ ಪ್ರಮುಖ ಕಾರ್ಯಸೂಚಿಯಾಗಿದೆ ಎಂದು ಮೋದಿ ಹೇಳಿದ್ದಾರೆ.
ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಇಂಡೋನೇಷ್ಯಾ ಅಧ್ಯಕ್ಷ ವಿಡೋಡೋ, ಸೋಮವಾರ ಭಾರತಕ್ಕೆ ಆಗಮಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.