ನವದೆಹಲಿ: ರಾಜ್ಯಸಭೆಯಲ್ಲಿ ದಿವ್ಯಾಂಗ ವ್ಯಕ್ತಿಗಳ ಹಕ್ಕು ಶಾಸನ, 2014 ಜಾರಿಗೆ ಬಂದ ನಂತರ ಇದೀಗ ಲೋಕಸಭೆಯಲ್ಲಿ ಧ್ವನಿ ಮತದೊಂದಿಗೆ ಈ ಕಾನೂನು ಜಾರಿಗೆ ತರಲಾಗಿದೆ.
ದಿವ್ಯಾಂಗ ವ್ಯಕ್ತಿಗಳ ಹಕ್ಕು ಮಸೂದೆ, 2014 ಈ ಹಿಂದಿನ ದಿವ್ಯಾಂಗ ವ್ಯಕ್ತಿಗಳು (ಸಮಾನ ಅವಕಾಶಗಳು, ಹಕ್ಕುಗಳ ರಕ್ಷಣೆ ಮತ್ತು ಸಂಪೂರ್ಣ ಭಾಗವಹಿಸುವಿಕೆ) ಕಾಯಿದೆ 1995 ಬದಲಾವಣೆಯೊಂದಿಗೆ ಜಾರಿಗೊಳಿಸಲಾಗಿದೆ.
ಮಸೂದೆಯನ್ನು ಜಾರಿಗೊಳಿಸಿ ಮಾತನಾಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್ ಚಂದ್ ಗೆಹ್ಲೋಟ್, ದಿವ್ಯಾಂಗ ವ್ಯಕ್ತಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಲವು ಯೋಜನೆಗಳ ಲಾಭ ಪಡೆಯಲು ಮಸೂದೆ ಅಡಿಯಲ್ಲಿ ಬರುವ ವಿವಿಧ ವಿಭಾಗಗಳನ್ನು ೭ರಿಂದ ೨೧ಕ್ಕೆ ಏರಿಸಲಾಗಿದೆ ಎಂದು ಹೇಳಿದ್ದಾರೆ.
ಈ ಮಸೂದೆ ಅಡಿಯಲ್ಲಿ ಸರ್ಕಾರಿ ನೌಕರಿಗಳ ಮಾನದಂಡಗಳಲ್ಲಿ ಪ್ರಸ್ತುತ ಇರುವ ಮೀಸಲಾತಿಯನ್ನು ಶೇ.3ರಿಂದ 4ಕ್ಕೆ ಏರಿಸಲಾಗಿದೆ. ಜೊತೆಗೆ ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಇರುವ ಮೀಸಲಾತಿಯನ್ನು ಶೇ.3ರಿಂದ 5ಕ್ಕೆ ಏರಿಕೆ ಮಾಡಲಾಗಿದೆ.
ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಲಹಾ ಮಂಡಳಿಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಮೂಲ ಮಸೂದೆಗೆ 120 ತಿದ್ದುಪಡಿಗಳೊಂದಿಗೆ ಈ ಮಸೂದೆಗೆ ಅನುಮೋನೆ ನೀಡಿತ್ತು.
ದಿವ್ಯಾಂಗ ವ್ಯಕ್ತಿಗಳ ವಿರುದ್ಧ ತಾರತಮ್ಯ ತೋರಿದಲ್ಲಿ 2 ವರ್ಷ ಜೈಲು ಶಿಕ್ಷೆ, 5 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುವುದು.
ದಿವ್ಯಾಂಗ ವ್ಯಕ್ತಿಗಳ ಹಕ್ಕು ಮತ್ತು ಅಧಿಕಾರದ ಭಧ್ರತೆಯ ಗುರಿಯೊಂದಿಗೆ ಜಾರಿಗೆ ತರಲಾಗಿದೆ. ದಿವ್ಯಾಂಗ ವ್ಯಕ್ತಿಗಳ ವಿರುದ್ಧ ತಾರತಮ್ಯ ತೋರಿದಲ್ಲಿ ಕನಿಷ್ಠ 6 ತಿಂಗಳಿನಿಂದ 2 ವರ್ಷದ ವರೆಗೆ ಜೈಲು ಶಿಕ್ಷೆ, ಜೊತೆಗೆ ರೂ.10,000ದಿಂದ 5 ಲಕ್ಷದ ವರೆಗೆ ದಂಡ ಅನುಭವಿಸಬೇಕಿದೆ.
ಈ ಬಿಲ್ ದಿವ್ಯಾಂಗ ವ್ಯಕ್ತಿಗಳ ಹಕ್ಕುಗಳ ಯುಎನ್ ಕನ್ವೆನ್ಷನ್ನ ಮತ್ತು ಸಂಬಂಧಿತ ವಿಷಯಗಳನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.