ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಗದು ರಹಿತ ವ್ಯವಹಾರದ ಕ್ರಮವನ್ನು ಬೆಂಬಲಿಸಿರುವ ಭಾತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ ಅವರು, ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕಾರ್ಯನಿರ್ವಹಣೆ ಯಥಾಸ್ಥಿತಿಗೆ ಮರಳಿದ ನಂತರ ಅನುದಾನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ನಗದು ವ್ಯವಹಾರಗಳು ದೊಡ್ಡ ಹೊರೆಯಾಗಿದೆ. ನಗದು ರಹಿತ ವ್ಯವಹಾರಕ್ಕೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಭಟ್ಟಾಚಾರ್ಯ ಅವರು ಪ್ರಧಾನಿ ಮೋದಿ ಅವರ ರೂ. 500 ಮತ್ತು ರೂ.1000 ನೋಟುಗಳ ನಿಷೇಧದ ಕ್ರಮವನ್ನು ಸ್ವಾಗತಿಸಿದ್ದು, ನಾವು ಎಟಿಎಂಗಳಲ್ಲಿ ಹಣ ತುಂಬಿ ಅತಿ ಶೀಘ್ರದಲ್ಲೇ ಕಾರ್ಯ ನಿರ್ವಹಿಸುವಂತೆ ಮಾಡಲಿದ್ದೇವೆ. ಸರ್ಕಾರ ತುರ್ತು ಪೂರೈಕೆಯನ್ನು ಖಚಿತಪಡಿಸಲು ಸಾಕಷ್ಟು ವಿನಾಯಿತಿಯನ್ನು ನೀಡಿದೆ. ನಾವು ಗ್ರಾಹಕರು ಸರಾಗವಾಗಿ ವ್ಯವಹಾರ ನಡೆಸಲು ದಿನದ 24 ತಾಸು ಕಾರ್ಯ ನಿರ್ವಹಿಸಲಿದ್ದೇವೆ ಎಂದು ಅರುಂಧತಿ ಭಟ್ಟಾಚಾರ್ಯ ಹೇಳಿದ್ದಾರೆ.
ಭಾರತ ನಗದು ರಹಿತ ವ್ಯವಹಾರಕ್ಕೆ ಪ್ರಾಧಾನ್ಯತೆ ನೀಡಲು ಬಯಸಿದಲ್ಲಿ, ಜನರಿಗೆ ಕೇವಲ ನಗದು ರಹಿತ ವ್ಯವಹಾರಕ್ಕೆ ಪ್ರೋತ್ಸಾಹಿಸುವುದರೊಂದಿಗೆ ಅತಿ ಹೆಚ್ಚಿನ ನಗದು ವ್ಯವಹಾರಕ್ಕೆ ತಡೆ ನೀಡಬೇಕು. ಇದು ಸಮಾಜಕ್ಕೆ ದೊಡ್ಡ ಹೊರೆಯಾಗಿದೆ ಎಂದು ಅವು ಹೇಳಿದ್ದಾರೆ.
ಬ್ಯಾಂಕ್ ನೋಟುಗಳು ಸೂಕ್ತ ಮಾದರಿಯಲ್ಲಿ ಲಭ್ಯವಾದಲ್ಲಿ ಮಾತ್ರವೇ ಪ್ರಸ್ತುತ ಹಣ ವಿತ್ಡ್ರಾ ಮೇಲಿನ ನಿರ್ಬಂಧಗಳನ್ನು ಹಿಂಪಡೆಯಲಾಗುವುದು. ನೋಟು ನಿಷೇಧದಿಂದ ವಿವಿಧ ಬ್ಯಾಂಕ್ ಶಾಖೆಗಳಲ್ಲಿ ನಗದು ವ್ಯವಹಾರಕ್ಕೆ ಅಡ್ಡಿ ಉಂಟಾಗಿದ್ದರೂ ಎಸ್ಬಿಐ ಪ್ರತಿ ನಿತ್ಯ 1 ಲಕ್ಷ ಬ್ಯಾಂಕ್ ಖಾತೆಗಳನ್ನು ತೆರೆಯುತ್ತಿದೆ ಎಂದು ಭಟ್ಟಾಚಾರ್ಯ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.