ನವದೆಹಲಿ: ಉತ್ತರಪ್ರದೇಶದಲ್ಲಿ ಮೋದಿ ಅಲೆ ಸಂಚಲನ ಸೃಷ್ಟಿಸಿದ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ.ಚಿದಂಬರ್, ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತುತ ಕಾಲದ ಅತೀ ಪ್ರಬಲ ರಾಜಕೀಯ ನಾಯಕ ಎಂದು ಬಣ್ಣಿಸಿದ್ದಾರೆ.
ಉತ್ತರಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬಿಜೆಪಿ ಜಯಗಳಿಸಿ ಅಂತರ ನಿಜಕ್ಕೂ ಅಭೂತಪೂರ್ವ ಮತ್ತು ಕಂಗೆಡಿಸುವಂತದ್ದು ಎಂದಿದ್ದಾರೆ.
ಇಂಡಿಯನ್ ಎಕ್ಸ್ಪ್ರೆಸ್ನ ಕಾಲಂನಲ್ಲಿ ತನ್ನ ಅನಿಸಿಕೆ ವ್ಯಕ್ತಪಡಿಸಿರುವ ಅವರು, ‘ಯುಪಿ ಮತ್ತು ಉತ್ತರಾಖಂಡ ಚುನಾವಣೆ ಮೋದಿಯೊಬ್ಬ ಪ್ರಬಲ ರಾಜಕೀಯ ನಾಯಕ ಎಂಬುದನ್ನು ಸಾಬೀತುಪಡಿಸಿದೆ, ಇದರಲ್ಲಿ ಯಾವುದೇ ಅನುಮಾನವಿಲ್ಲ. ಬಿಜೆಪಿ ಗೆಲುವಿನ ಅಂತರ ಅಭೂತಪೂರ್ವ ಮತ್ತು ಕಂಗೆಡಿಸುವಂತದ್ದು. ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಹೊರಬೀಳುವ ತನಕ ಬಿಜೆಪಿಯ ಈ ವಿಜಯವನ್ನು ಯಾರೂ ನಿರೀಕ್ಷಿಸಿರಲಿಲ್ಲ. ಚುನಾವಣಾ ಪಂಡಿತರು ಈ ಬಾರಿ ತಪ್ಪಿದ್ದಾರೆ’ ಎಂದಿದ್ದಾರೆ.
‘ಈ ಕ್ಷಣದ ಮನುಷ್ಯ ಮೋದಿ, ಬಿಹಾರ ಚುನಾವಣಾ ಸೋಲಿನ ಬಳಿಕ ಅವರು ಮತ್ತೆ ತಮ್ಮ ಸಂವಹನ ಚಾತುರ್ಯ್ಯದ ಸ್ಥಾನವನ್ನು ಅಲಂಕರಿಸಿದ್ದಾರೆ’ ಎಂದಿದ್ದಾರೆ.
ದೇಶದ ಅತೀದೊಡ್ಡ ರಾಜ್ಯವನ್ನು ನಿರೀಕ್ಷೆಗೂ ಮೀರಿದ ಅಂತರದಲ್ಲಿ ಬಿಜೆಪಿ ಗೆದ್ದುಕೊಂಡಿದ್ದು ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳನ್ನು ಆಘಾತಕ್ಕೊಳಪಡಿಸಿದೆ. ಬಿಹಾರ ಚುನಾವಣಾ ಸೋಲಿನ ಬಳಿಕ ತನ್ನನ್ನು ಟೀಕೆಗೊಳಪಡಿಸುತ್ತಿದ್ದ ಪ್ರತಿಪಕ್ಷಗಳಿಗೆ ಮೋದಿ ತಾನು ಏನು ಎಂಬುದನ್ನು ಮತ್ತೊಮ್ಮೆ ಸಾಬೀತುಡಿಸಿ ತೋರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.