ನವದೆಹಲಿ: ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ತರುವ ಸಲುವಾಗಿ ಹಲವಾರು ಮಹತ್ವದ ಬದಲಾವಣೆಗಳನ್ನು ಪರಿಚಯಿಸಿದ್ದಾರೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್.
ಈ ಬದಲಾವಣೆಗಳ ಅನ್ವಯ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಪಾಸು ಮಾಡಲು ಎರಡು ಅವಕಾಶಗಳು ದೊರೆಯಲಿದೆ. ಮೊದಲ ಪರೀಕ್ಷೆಯ ಮಾರ್ಚ್ನಲ್ಲಿ ನಡೆಯಲಿದ್ದು ಇದರಲ್ಲಿ ಅನುತ್ತೀರ್ಣಗೊಂಡವರಿಗಾಗಿ ಮತ್ತೊಂದು ಪರೀಕ್ಷೆಯನ್ನು ಜೂನ್ನಲ್ಲಿ ನಡೆಸಲಾಗುತ್ತದೆ.
10ನೇ ತರಗತಿಯ ಪರೀಕ್ಷೆ ಕಡ್ಡಾಯವಾಗಲಿದೆ. ಮಕ್ಕಳ ಪ್ರದರ್ಶನವನ್ನು ಪರೀಕ್ಷಿಸಲು ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹ್ಯಾಂಡ್ಬುಕ್ ತರಲಾಗುತ್ತಿದೆ.
ಇನ್ನೂ ಹಲವಾರು ರೀತಿಯ ಬದಲಾವಣೆಗಳನ್ನು ಅವರು ತರಲಿದ್ದು, ಇದರ ಚರ್ಚೆಗಾಗಿ 25 ರಾಜ್ಯಗಳ ಶಿಕ್ಷಣ ಸಚಿವರನ್ನೊಳಗೊಂಡ ಸಭೆಯನ್ನು ಅವರು ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.