ನವದೆಹಲಿ: ಪಾಕಿಸ್ಥಾನದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ಭಾರತದ ಮಾಜಿ ನೌಕಾಧಿಕಾರಿ ಕುಲಭೂಷಣ್ ಯಾದವ್ ಅವರ ಪ್ರಕರಣದಲ್ಲಿ ಭಾರತದ ಪರವಾಗಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಹರೀಶ್ ಸಾಲ್ವೆ ಇದಕ್ಕಾಗಿ ಕೇವಲ 1 ರೂಪಾಯಿ ದರವನ್ನು ನಿಗಧಿಪಡಿಸಿದ್ದಾರೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸಾಲ್ವೆ ಅವರು ಎಷ್ಟು ದರ ಪಡೆಯುತ್ತಿದ್ದಾರೆ ಎಂಬ ಬಗ್ಗೆ ಟ್ವಿಟರ್ನಲ್ಲಿ ಬಹಿರಂರಪಡಿಸಿದ್ದಾರೆ.
ಕುಲಭೂಷಣ್ ಅವರ ಮರಣದಂಡನೆಯನ್ನು ರದ್ದುಪಡಿಸಬೇಕು ಎಂದು ಕೋರಿ ಅಂತಾರಾಷ್ಟ್ರೀಯ ಕೋರ್ಟ್ನಲ್ಲಿ ಸಾಲ್ವೆ ಅವರು ಸೋಮವಾರ 1.5 ಗಂಟೆಗಳ ಕಾಲ ವಾದ ಮಂಡಿಸಿದ್ದಾರೆ.
ಸಾಲ್ವೆ ಸಾಂವಿಧಾನಿಕ ಕಾನೂನಿನಲ್ಲಿ ತಜ್ಞತೆಯನ್ನು ಹೊಂದಿದ್ದು, ಅತ್ಯಂತ ಹಿರಿಯ ವಕೀಲರಾಗಿದ್ದಾರೆ. ಭಾರತದ ಪರವಾಗಿ ಅಂತಾರಾಷ್ಟ್ರೀಯ ಕೋರ್ಟ್ನಲ್ಲಿ ವಾದ ಮಂಡಿಸುವುದಕ್ಕಾಗಿ ಅವರು ಕೇವಲ 1 ರೂಪಾಯಿಗಳನ್ನು ಸಾಂಕೇತಿಕವಾಗಿ ಪಡೆಯುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.