ಜೈಪುರ: ಅಜ್ಜಿ ಕಥೆಗಳೆಂದರೆ ಎಲ್ಲಾ ಮಕ್ಕಳಿಗೂ ಅಚ್ಚುಮೆಚ್ಚು. ಆದರೆ ಇಂದಿನ ತಂತ್ರಜ್ಞಾನ ಯುಗದಲ್ಲಿ ಕಥೆ ಹೇಳುವ ಅಜ್ಜಿಯರೂ ವಿರಳ, ಕಥೆಯನ್ನು ಕೇಳುವ ಮೊಮ್ಮಕ್ಕಳೂ ವಿರಳ. ಆದರೆ ರಾಜಸ್ಥಾನದ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಅಜ್ಜಿಯರಿಂದ ಕಥೆ ಕೇಳುವ ಅವಕಾಶವನ್ನು ಒದಗಿಸಿಕೊಡಲಿದೆ.
ಪ್ರೌಢ ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ’ಅಜ್ಜಿಯರೊಂದಿಗೆ ಬಾಲಸಭಾ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು, ಇಲ್ಲಿ ವಿದ್ಯಾರ್ಥಿಗಳ ಅಜ್ಜಿಯಂದಿರು ಬಂದು ಕಥೆಗಳನ್ನು ಹೇಳಬಹುದು.
ಕುಟುಂಬದ ಹಿರಿಯರನ್ನು ಕರೆತರುವ ಮೂಲಕ ಶಿಕ್ಷಣದಲ್ಲಿ ಸಮುದಾಯದ ಭಾಗಿತ್ವವನ್ನು ಹೆಚ್ಚಿಸುವ ಸಲುವಾಗಿ ಈ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಶಿಕ್ಷಣ ನಿರ್ದೇಶಕ ಅರುಣ್ ಕುಮಾರ್ ಶರ್ಮಾ ಹೇಳಿದ್ದಾರೆ.
ಮಕ್ಕಳಲ್ಲಿ ನೈತಿಕ ಮೌಲ್ಯ, ವಾಕ್ ಪ್ರಾವೀಣ್ಯತೆಯನ್ನೂ ಹೆಚ್ಚಿಸಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ. ಅಲ್ಲದೇ ತಂತ್ರಜ್ಞಾನ ಯುಗದಲ್ಲಿ ಪರಿಚಿಕೆಯಾದ ಅಜ್ಜಿ ಕಥೆಗಳಿಗೂ ಮರು ಜೀವ ನೀಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.