ನವದೆಹಲಿ: ಗ್ರಾಮೀಣ ಭಾರತದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಿಳೆಯರನ್ನು ನಿಯೋಜಿಸಿ ಸಾರಿಗೆ ವ್ಯವಸ್ಥೆಯನ್ನು ಚಲಾಯಿಸಲು ನಿರ್ಧರಿಸಿದೆ.
ಪ್ರಧಾನ್ ಮಂತ್ರಿ ಗ್ರಾಮೀಣ್ ಪರಿವಾಹನ್ ಯೋಜನೆಯಡಿ ಸ್ವಸಹಾಯ ಗುಂಪುಗಳ ಮಹಿಳೆಯರನ್ನು ಸಾರಿಗೆ ವ್ಯವಸ್ಥೆ ಬಲಗೊಳಿಸಲು ಬಳಕೆ ಮಾಡಿಕೊಳ್ಳಲಾಗುತ್ತದೆ.
ವಾಹನ ಖರೀದಿಸಲು ಮತ್ತು ಡ್ರೈವರನ್ನು ನೇಮಿಸಲು ಅವರ ಸ್ವಸಹಾಯ ಗುಂಪುಗಳ ಮೂಲಕ ಬಡ್ಡಿ ರಹಿತ ಸಾಲಗಳನ್ನು ನೀಡಲಾಗುತ್ತದೆ.
ಈ ಯೋಜನೆಯನ್ನು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಜಾರಿಗೆ ತರುತ್ತೇವೆ. ಈ ಯೋಜನೆಯಿಂದ ರೈತರು ತಮ್ಮ ಕೃಷಿ ಉತ್ಪನ್ನಗಳನ್ನೂ ಮಾರುಕಟ್ಟೆಗೆ ಸಾಗಿಸಲು ಸಹಾಯಕವಾಗುತ್ತದೆ ಎಂದು ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಅಮರ್ಜೀತ್ ಸಿನ್ಹಾ ಹೇಳಿದ್ದಾರೆ.
’10-12 ಸೀಟುಗಳುಳ್ಳ ವಾಹನಗಳನ್ನು ರೂ.8 ಲಕ್ಷಕ್ಕೆ ಖರೀದಿ ಮಾಡಬಹುದು. ಇದನ್ನು ಜನರನ್ನು ಸಾಗಿಸಲು ಮಾತ್ರವಲ್ಲದೇ, ಕೋಳಿ ಮತ್ತು ಕೃಷಿ ಉತ್ಪನ್ನಗಳ ಸಾಕಾಣೆಗೂ ಬಳಸಬಹುದು’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.