ಶ್ರೀನಗರ: ಕಳೆದ ತಿಂಗಳು 9 ಪೊಲೀಸರ ಹತ್ಯೆಗೆ ಕಾರಣನಾಗಿದ್ದ ಲಷ್ಕರ್-ಇ-ತೋಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಬಶೀರ್ ಲಕ್ಷರಿ ಮತ್ತು ಇತರ ಇಬ್ಬರು ಉಗ್ರರನ್ನು ಸೇನಾಪಡೆಗಳು ಶನಿವಾರ ಕಾಶ್ಮೀರದಲ್ಲಿ ಹೊಡೆದುರುಳಿಸಿವೆ.
ಅನಂತ್ನಾಗ್ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಈ ಮೂವರು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಶೀರ್ ಹತ್ಯೆಯನ್ನು ಜಮ್ಮು ಕಾಶ್ಮೀರ ಡಿಜಿಪಿ ಖಚಿತಪಡಿಸಿದ್ದಾರೆ.
ಅನಂತ್ನಾಗ್ನ ಬ್ರೆಂತಿ ಗ್ರಾಮದಲ್ಲಿ ಈ ಮೂವರು ಅವಿತು ಕುಳಿತಿದ್ದ ವೇಳೆ ಕಾರ್ಯಾಚರಣೆ ನಡೆಸಿ ಹತ್ಯೆ ಮಾಡಲಾಗಿದೆ.
ಜೂನ್ 16ರಂದು ದಕ್ಷಿಣ ಕಾಶ್ಮೀರದ ಅಚಬಲದಲ್ಲಿ 6 ಪೊಲೀಸರನ್ನು ಉಗ್ರರು ಹತ್ಯೆ ಮಾಡಿದ್ದರು. ಇದರಲ್ಲಿ ಈ ಮೂವರ ಕೈವಾಡವಿತ್ತು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.