ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬಾಲ್ಯದಲ್ಲಿ ಟೀ ಮಾರುತ್ತಿದ್ದ ಜಾಗವು ಇದೀಗ ಪ್ರವಾಸಿ ತಾಣವಾಗಿ ಅಭಿವೃದ್ಧಿಯಾಗಲಿದೆ. ಕೇಂದ್ರ ಸರ್ಕಾರವು ಇದಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಿದ್ದು, ಇದೊಂದು ಐತಿಹಾಸಿಕ ತಾಣವಾಗಿಯೂ ಮಾರ್ಪಾಡಲಾಗಲಿದೆ.
ಪ್ರಧಾನಿ ನರೇಂದ್ರ ಮೋದಿಯವರು ಹುಟ್ಟೂರಿನಲ್ಲಿ ತಮ್ಮ ಬಾಲ್ಯದಲ್ಲಿ ಗುಜರಾತಿನ ವಾಡ್ನಗರ್ ರೈಲ್ವೇ ನಿಲ್ದಾಣದಲ್ಲಿನ ಟೀ ಮಾರುತ್ತಿದ್ದರು. ಇದೀಗ ಪ್ರಧಾನಿ ಮೋದಿ ವಿಶ್ವಪ್ರಸಿದ್ಧ ನಾಯಕರಾಗಿ ಬೆಳೆದಿದ್ದಾರೆ. ಅಂದಿನ ದಿನಗಳಲ್ಲಿ ಟೀ ಮಾರುತ್ತಿದ್ದುದನ್ನು ಪ್ರಧಾನಿ ಮೋದಿ ಇಂದಿಗೂ ಮರೆತಿಲ್ಲ. 2014 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಖುದ್ದು ಅವರೇ ತಾವು ಚಾಯ್ವಾಲಾ ಎಂದು ಹೇಳಿಕೊಂಡಿದ್ದರು.
ಇದೀಗ ಈ ರೈಲ್ವೇ ನಿಲ್ದಾಣವನ್ನು ಪ್ರವಾಸಿ ತಾಣವನ್ನಾಗಿಸುವ ಯೋಜನೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಮಹೇಶ್ ಶರ್ಮಾ ನೇತೃತ್ವದಲ್ಲಿ ಭಾರತದ ಪುರಾತತ್ವ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿದ್ದಾರೆ.
ಈ ರೈಲ್ವೆ ನಿಲ್ದಾಣದಲ್ಲಿ ಮೋದಿಯವರು ಚಹಾ ಮಾರುತ್ತಿದ್ದ ಟೀ ಅಂಗಡಿಯನ್ನು ಹಾಗೇ ಇಟ್ಟು ಅದಕ್ಕೆ ಆಧುನಿಕ ಸ್ಪರ್ಶ ನೀಡಲಾಗುವುದು, ಅಲ್ಲದೆ ರೈಲು ನಿಲ್ದಾಣವನ್ನು ಹೈಟೆಕ್ ನಿಲ್ದಾಣವನ್ನಾಗಿಸಿ, ಇದೊಂದು ಪ್ರವಾಸಿ ತಾಣವನ್ನಾಗಿಸಲಾಗುವುದು ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಮಹೇಶ್ ಶರ್ಮಾ ಅವರು ಹೇಳಿದ್ದಾರೆ.
ವಾಡ್ನಗರ್ ಪ್ರಧಾನಿ ಮೋದಿಯವರ ಜನ್ಮಸ್ಥಳವೊಂದೇ ಆಗಿರದೆ, ಶರ್ಮಿತಾ ಸರೋವರವನ್ನು ಹೊಂದಿರುವ ಒಂದು ಐತಿಹಾಸಿಕ ಸ್ಥಳವಾಗಿದೆ. ಇತ್ತೀಚೆಗಷ್ಟೇ ಇಲ್ಲಿ ಎಎಸ್ಐ ಉತ್ಖನನ ಸಮಯದಲ್ಲಿ ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಕೆಲವು ಅವಶೇಷಗಳನ್ನು ಪತ್ತೆ ಹಚ್ಚಿದೆ ಎಂದು ಸಚಿವ ಮಹೇಶ್ ಶರ್ಮಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.