ನವದೆಹಲಿ : ಅಮಾನ್ಯಗೊಂಡ ನೋಟುಗಳ ಜಮಾವಣೆಗೆ ಮತ್ತೊಂದು ಅವಕಾಶ ನೀಡಬಹುದಾ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಅಮಾನ್ಯಗೊಂಡ ನೋಟುಗಳನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಈ ಕುರಿತು ಅರ್ಜಿಯೊಂದು ದಾಖಲಾಗಿತ್ತು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೆಲವು ಕಾರಣಗಳಿಂದಾಗಿ ಹಳೆಯ ನೋಟುಗಳನ್ನು ಜಮೆ ಮಾಡಲಾಗದವರಿಗೆ ಮತ್ತೊಂದು ಅವಕಾಶ ನೀಡಬಲ್ಲಿರಾ ಎಂದು ಕೇಂದ್ರ ಸರ್ಕಾರವನ್ನು ಕೇಳಿದ್ದು, ಇದಕ್ಕೆ ಜುಲೈ 17 ರೊಳಗೆ ಉತ್ತರಿಸುವಂತೆ ಕೇಂದ್ರ ಸರ್ಕಾರ ಹಾಗೂ ಆರ್ಬಿಐಗೆ ಸೂಚಿಸಿದೆ.
ಕಷ್ಟಪಟ್ಟು ಮಾಡಿದ ಸಂಪಾದನೆ, ನ್ಯಾಯಯುತವಾಗಿ ಸಂಪಾದಿಸಿರುವ ಹಣಕ್ಕೆ ಅನ್ಯಾಯವಾಗುವುದಿಲ್ಲ ಎಂದು ಜನರಿಗೆ ಭರವಸೆ ನೀಡಿದ್ದೀರಿ. ಈಗ ನಿಮ್ಮ ಭರವಸೆಯನ್ನು ಸುಳ್ಳು ಮಾಡಲು ಸಾಧ್ಯವಿಲ್ಲ. ಡಿ. 31 ರ ನಂತರವೂ ಕೆಲವರಿಗೆ ಪ್ರಾಮಾಣಿಕ ಕಾರಣಗಳಿಂದಾಗಿ ಅಮಾನ್ಯಗೊಂಡ ನೋಟುಗಳನ್ನು ಜಮೆ ಮಾಡಲು ಸಾಧ್ಯವಾಗದಿದ್ದವರಿಗೆ ಜಮೆ ಮಾಡಲು ಮತ್ತೊಂದು ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
2016 ರ ನವೆಂಬರ್ 8 ರಂದು ರಾತ್ರಿ 500 ರೂ. ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಲಾಗಿತ್ತು. ಅಮಾನ್ಯಗೊಂಡ ನೋಟುಗಳನ್ನು ಜಮೆ ಮಾಡಲು 2016 ಡಿಸೆಂಬರ್ 31 ರವರೆಗೆ ಗಡುವು ನೀಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.