ನವದೆಹಲಿ: ಬಿಜೆಪಿ ಧುರೀಣ ಎಲ್.ಕೆ.ಅಡ್ವಾಣಿ ಅವರು ಸಂಸದೀಯ ಪಟುವಾಗಿ ನೀಡಿದ ಅಪಾರ ಕೊಡುಗೆಗಾಗಿ ಅವರಿಗೆ ಬುಧವಾರ ಲೋಕಸಭೆಯಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ರಾಜ್ಯಸಭಾ ಸದಸ್ಯ ಶರದ್ ಯಾದವ್ ಅವರಿಗೂ ಜೀವಮಾನದ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಜಯಾ ಬಚ್ಚನ್ ಅವರಿಗೆ ಅತ್ಯುತ್ತಮ ಸಂಸದೀಯ ಪಟು ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಎಂ.ಕೆ.ಪ್ರೇಮಚಂದ್ರನ್, ಕಾಂಗ್ರೆಸ್ ನಾಯಕ ಕುಮಾರಿ ಸುಶ್ಮೀತಾ ದೇವ್, ಬಿಜೆಪಿಯ ಮೀನಾಕ್ಷಿ ಲೇಖಿ ಅವರೂ ಲೋಕಸಭೆಯ ಉತ್ತಮ ಸದಸ್ಯರು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ರಾಜ್ಯಸಭೆಯ ಸೀತಾರಾಮ್ ಯೆಚೂರಿ, ಜಯಾ ಬಚ್ಚನ್, ರಜನಿ ಪಾಟೀಲ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಇವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.