ನವದೆಹಲಿ: ಮಳೆಗಾಲದ ಅಧಿವೇಶನದ ನಾಲ್ಕನೇ ದಿನ ಸರ್ಕಾರ ಹಲವಾರು ವಿಷಯಗಳ ಬಗೆಗಿನ ಮಾಹಿತಿಯನ್ನು ಬಿಡುಗಡೆ ಮಾಡಿದೆ.
ಅನಾಥ ಮಕ್ಕಳನ್ನು ಕಸದ ತೊಟ್ಟಿಯಲ್ಲಿ ಹಾಕುವ ಬದಲು ತೊಟ್ಟಿಲಲ್ಲಿ ಹಾಕಲಿ ಎಂಬ ಕಾರಣಕ್ಕೆ ಆರಂಭಿಸಲಾದ ಆಸ್ಪತ್ರೆ ಮತ್ತು ಇತರ ಜಾಗಗಳಲ್ಲಿ ತೊಟ್ಟಿಲು ಅಳವಡಿಸುವ ಅಭಿಯಾನದಡಿ ಈಗಾಗಲೇ 205 ಅನಾಥ ಮಕ್ಕಳನ್ನು ಪತ್ತೆ ಮಾಡಲಾಗಿದೆ ಎಂದು ಸಚಿವ ಮೇನಕಾ ಗಾಂಧೀ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 4.2 ಲಕ್ಷ ಉದ್ದೆಗಳು ಖಾಲಿ ಇವೆ ಎಂದು ರಾಜ್ಯಸಭೆಗೆ ಸಚಿವ ಜಿತೇಂದ್ರ ಸಿಂಗ್ ತೋಮರ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಉತ್ತಮ ಪ್ರದರ್ಶನ ನೀಡದ 133 ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಲಾಗಿದೆ ಎಂದಿದ್ದಾರೆ.
ಸರ್ಕಾರದ ವಿವಿಧ ಯೋಜನೆಗಳನ್ನು ಪ್ರಚಾರಪಡಿಸಲು 2016-17ನೇ ಸಾಲಿನಲ್ಲಿ ಡೈರೆಕ್ಟೋರೇಟ್ ಆಫ್ ಅಡ್ವರ್ಟೈಸಿಂಗ್ ಆಂಡ್ ವಿಶ್ಯುಲ್ ಪಬ್ಲಿಸಿಟಿ ಇದುವರೆಗೆ ಒಟ್ಟು 1,286 ಕೋಟಿ ರೂಪಾಯಿಗಳನ್ನು ವ್ಯಯಿಸಿದೆ ಎಂದು ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.