ಹೈದರಾಬಾದ್: ಕೃಷಿ ವಲಯಕ್ಕೆ ದಿನದ 24 ಗಂಟೆಯೂ ವಿದ್ಯುತ್ ಒದಗಿಸಲು ತೆಲಂಗಾಣದ ವಿದ್ಯುತ್ ಮಂಡಳಿ ನಿರ್ಧರಿಸಿದ್ದು, ಮುಂದಿನ ಫೆಬ್ರವರಿಯಿಂದ ಈ ಯೋಜನೆ ಜಾರಿಯಾಗಲಿದೆ.
24×7 ವಿದ್ಯುತ್ನ್ನು ಕರೀಂನಗರ, ಮೇಧಕ್, ನಲಗೊಂಡದಲ್ಲಿ ಪ್ರಾಯೋಗಿಕವಾಗಿ ನೀಡಲಾಗುತ್ತಿದೆ. ಇದರ ತಾಂತ್ರಿಕ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲು ಈ ಮೂರು ಜಿಲ್ಲೆಗಳನ್ನು 10 ಆಡಳಿತ ಘಟಕಗಳಾಗಿ ವಿಭಾಗೀಕರಿಸಲಾಗಿದೆ.
ಇಡೀ ರಾಜ್ಯದ ಕೃಷಿ ವಲಯಕ್ಕೆ ತೊಡಕಿಲ್ಲದಂತೆ ವಿದ್ಯುತ್ ನೀಡಲು ಈಗಿನಿಂದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ 1600 ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದೆ. ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಈ ಕ್ರಮಕೈಗೊಳ್ಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.