ಪಣಜಿ: ವಯಸ್ಸಾದ ಗೋವುಗಳನ್ನು ಸಾಕಲು ರೈತರಿಗೆ ಸಹಾಯಕವಾಗುವಂತೆ ಅವರಿಗೆ ಹಣಕಾಸು ನೆರವು ನೀಡುವ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲು ಗೋವಾ ಸರ್ಕಾರ ನಿರ್ಧರಿಸಿದೆ.
ಈಗಾಗಲೇ ಗೋವಾದಲ್ಲಿ ಗೋಹತ್ಯೆಯನ್ನು ನಿಷೇಧಿಸಲಾಗಿದೆ.
ಈ ಬಗ್ಗೆ ವಿಧಾನಸಭೆಯಲ್ಲಿ ಹೇಳಿಕೆ ನೀಡಿರುವ ಮನೋಹರ್ ಪರಿಕ್ಕರ್, ‘ಆರ್ಥಿಕವಾಗಿ ಹಸುಗಳನ್ನು ಸಾಕುವುದು ಅವುಗಳು ಹಾಲು ಕೊಡುವವರೆಗೆ ಮಾತ್ರ. ಅವುಗಳಿಗೆ ವಯಸ್ಸಾದ ಬಳಿಕ ಅವುಗಳ ನಿರ್ವಹಣೆ ರೈತರಿಗೆ ಕಷ್ಟವಾಗುತ್ತದೆ. ಇದಕ್ಕಾಗಿ ಸರ್ಕಾರ ಇಂತಹ ಹಸುಗಳ ನಿರ್ವಹಣೆಗೆ ರೈತರಿಗೆ ಹಣಕಾಸು ನೆರವು ನೀಡುವ ಯೋಜನೆಯನ್ನು ತರಲಿದೆ’ ಎಂದಿದ್ದಾರೆ.
ರಾಜ್ಯದ ಬೀದಿ ದನಗಳ ನಿರ್ವಹಣೆ ಯೋಜನೆಯಡಿ ವಯಸ್ಸಾದ ಹಸುಗಳ ನಿರ್ವಹಣೆಗೆ ಹಣಕಾಸು ನೆರವು ನೀಡುವ ಯೋಜನೆ ತರಲಿದ್ದೇವೆ. ಇನ್ನು ಮೂರು ತಿಂಗಳಲ್ಲಿ ಇದು ಜಾರಿಗೆ ಬರಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.