ಲಕ್ನೋ: ಜನರ ಮತ್ತು ಸರ್ಕಾರದ ನಡುವಿಣ ಅಂತರವನ್ನು ಕಡಿಮೆಗೊಳಿಸುವ ಗುರಿಯೊಂದಿಗೆ ಉತ್ತರಪ್ರದೇಶದ ಬಿಜೆಪಿ ಸಚಿವರುಗಳು ವಾರಕ್ಕೆ ಎರಡು ಬಾರಿ ಸಾರ್ವಜನಿಕರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಸಾಮಾನ್ಯ ಸಭೆಯನ್ನು ನಡೆಸಲು ಉದ್ದೇಶಿಸಿದ್ದಾರೆ.
ಸಚಿವರುಗಳು ಪ್ರತಿ ಸೋಮವಾರ ಮತ್ತು ಮಂಗಳವಾರ ಜನತಾ ದರ್ಶನ ನಡೆಸಲಿದ್ದಾರೆ. ಉಳಿದ ದಿನಗಳ ಕಾಲ ಸಚಿವಾಲಯದ ಕಾರ್ಯ ಮತ್ತು ಪ್ರವಾಸಗಳನ್ನು ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಮುಖಂಡ ಶ್ರೀಕಾಂತ್ ಶರ್ಮಾ ಹೇಳಿದ್ದಾರೆ.
ಈ ಹೊಸ ಯೋಜನೆಯಿಂದಾಗಿ ಸಾರ್ವಜನಿಕರು ಮತ್ತು ಪಕ್ಷದ ಕಾರ್ಯಕರ್ತರು ವಾರಕ್ಕೆ ಎರಡು ಬಾರಿ ಸಚಿವರುಗಳನ್ನು ಭೇಟಿಯಾಗುವ ಮತ್ತು ಕುಂದು ಕೊರತೆಗಳನ್ನು ಅವರೊಂದಿಗೆ ಹಂಚಿಕೊಳ್ಳುವ ಅವಕಾಶವನ್ನು ಪಡೆದುಕೊಳ್ಳಲಿದ್ದಾರೆ ಎಂದಿದ್ದಾರೆ.
ಉಳಿದ ದಿನಗಳಲ್ಲಿ ತಮ್ಮ ಕಾರ್ಯದ ಕಡೆ ಸಚಿವರುಗಳು ಗಮನ ಕೊಡಲಿದ್ದಾರೆ. ಪ್ರವಾಸ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಸಮಯದ ವ್ಯರ್ಥವೂ ತಪ್ಪುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.