ನವದೆಹಲಿ: ಜನರನ್ನು ವಂಚಿಸುವುದಕ್ಕೆ ಕುಖ್ಯಾತಿ ಪಡೆದಿರುವ ಚಿಟ್ ಫಂಡ್ ಸ್ಕೀಮ್ಗಳನ್ನು ನಿಯಂತ್ರಿಸುವ ಸಲುವಾಗಿ ಹೊಸ ಕಾನೂನನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ತಯಾರಿ ನಡೆಸುತ್ತಿದೆ.
ವಂಚಕ ಕಂಪನಿಗಳಲ್ಲಿ ಜನರು ಬಂಡವಾಳ ಹೂಡಿಕೆ ಮಾಡಿ ಮೋಸ ಹೋಗುವುದನ್ನು ತಡೆಯುವ ಸಲುವಾಗಿ ಪ್ರಸ್ತುತ ಇರುವ ಕಾನೂನನ್ನು ಮತ್ತಷ್ಟು ಬಲಗೊಳಿಸುವ ಕಾರ್ಯವನ್ನು ಕೇಂದ್ರ ಮಾಡಲಿದೆ.
ಈ ಬಗ್ಗೆ ಲೋಕಸಭೆಯಲ್ಲಿ ಹೇಳಿಕೆ ನೀಡಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ‘ಎಸ್ಇಬಿಐ ಚಿಟ್ ಫಂಡ್ನ ಸದ್ಯದ ಕಾನೂನುಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಬಂಗಾಳ ಮತ್ತು ಒರಿಸ್ಸಾದಲ್ಲಿ ಇವುಗಳೊಂದಿಗೆ ವ್ಯವಹರಿಸಲು ರಾಜ್ಯ ಕಾನೂನುಗಳಿವೆ. ಆದರೆ ದೇಶದಾದ್ಯಂತ ಇರುವ ಚಿಟ್ ಫಂಡ್ ಕಂಪನಿಗಳನ್ನು ನಿಯಂತ್ರಿಸುವುದು ಹೇಗೆ? ಇದಕ್ಕಾಗಿ ಕಾನೂನನ್ನು ಸಿದ್ಧಪಡಿಸುತ್ತಿದ್ದೇವೆ. ಶೀಘ್ರವೇ ಅದನ್ನು ನಿಮ್ಮ ಮುಂದೆ ತರಲಿದ್ದೇವೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.