ನವದೆಹಲಿ : ಆರ್.ಎಸ್. ಎಸ್. ಕಾರ್ಯಕರ್ತ ರಾಜೇಶ್ ಹತ್ಯೆ ಸೇರಿದಂತೆ ಈವರೆಗೆ ಕೇರಳದಲ್ಲಿ ನಡೆದ ಆರ್.ಎಸ್. ಎಸ್. ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಕೇರಳದ ಕಮ್ಯುನಿಸ್ಟ್ ಸರಕಾರದ ವಿರುದ್ಧ ದಿನಾಂಕ 9-8-2017 ರಂದು ದೆಹಲಿಯ ಜಂತರ್ ಮಂತರ್ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.
ರಾಜೇಶ್ ನೀವು ಏಕಾಂಗಿಯಲ್ಲ – ಇಡೀ ದೇಶ ನಿಮ್ಮೊಂದಿಗಿದೆ ಎಂಬ ವಾಕ್ಯದೊಂದಿಗೆ ಪ್ರತಿಭಟನೆಯನ್ನು ನಡೆಸಲಾಯಿತು. ಈ ಸಂದರ್ಭ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು ಉಪಸ್ಥಿತರಿದ್ದರು. ಪ್ರತಿಭಟನೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಸಂಸದೆ ಶೋಭಾ ಕರಂದ್ಲಾಜೆ ಭಾಗವಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.