ನವದೆಹಲಿ: ಕಳೆದ ಐದು ದಿನಗಳಿಂದ ಸರಣಿ ಸಾಲಿನಲ್ಲಿ ರೈಲು ಅಪಘಾತಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ಸ್ವಯಂಪ್ರೇರಣೆಯಿಂದ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ತುಸು ಕಾಯುವಂತೆ ಅವರಿಗೆ ಸೂಚಿಸಿದ್ದಾರೆ.
ಸರಣಿ ರೈಲು ಅಪಘಾತಗಳ ಸಂಪೂರ್ಣ ನೈತಿಕ ಹೊಣೆಯನ್ನು ತಾನು ಹೊತ್ತು ಪದತ್ಯಾಗ ಮಾಡುವುದಾಗಿ ಅವರು ಹೇಳಿದ್ದಾರೆ.
ಕಳೆದ 3 ವರ್ಷಗಳಿಂದ ರೈಲ್ವೇಯ ಅಭಿವೃದ್ಧಿಗೆ ರಕ್ತ ಮತ್ತು ಬೆವರನ್ನು ಹರಿಸಿದ್ದೇನೆ. ಆದರೆ ಅಪಘಾತಗಳು ಉಂಟಾಗಿ ಜನರು ಸಾವಿಗೀಡಾಗಿರುವುದು ನನಗೆ ಅತೀವ ದುಃಖ ತಂದಿದೆ. ಪ್ರಧಾನಿಯವರನ್ನು ಭೇಟಿಯಾಗಿ ಪದತ್ಯಾಗದ ಬಗ್ಗೆ ಹೇಳಿದ್ದೇನೆ. ಕಾಯುವಂತೆ ಅವರು ಸೂಚಿಸಿದ್ದಾರೆ ಎಂದು ಪ್ರಭು ಟ್ವಿಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.