ನವದೆಹಲಿ: ಎನ್ಡಿಎ ಸರ್ಕಾರದ ಮಹತ್ವದ ಕಾರ್ಯಕ್ರಮಗಳಾದ ಸ್ವಚ್ಛ ಭಾರತ ಅಭಿಯಾನ, ಬೇಟಿ ಬಚಾವೋ ಬೇಟಿ ಪಡಾವೋ, ಡಿಜಿಟಲ್ ಇಂಡಿಯಾ ಅಭಿಯಾನ, ಅನಾಣ್ಯೀಕರಣ ಇವೆಲ್ಲವೂ ಮುಂದಿನ ಶೈಕ್ಷಣಿಕ ವರ್ಷದಿಂದ ಎನ್ಸಿಇಆರ್ಟಿ ಪಠ್ಯಪುಸ್ತಕಗಳಲ್ಲಿ ಅಳವಡಿಕೆಯಾಗಲಿದೆ.
ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆಂಡ್ ಟ್ರೈನಿಂಗ್(ಎನ್ಸಿಇಆರ್ಟಿ) ಸ್ವಾಯತ್ತ ಸಂಸ್ಥೆಯಾಗಿದ್ದು, ಶಾಲಾ ಶಿಕ್ಷಣದ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಲಹೆಗಳನ್ನು ನೀಡುತ್ತದೆ. ಇದೀಗ ಅದು ತನ್ನ ವಿವಿಧ ವಿಷಯಗಳ 182ಪಠ್ಯಪುಸ್ತಕಗಳಿಗೆ ಬದಲಾವಣೆ ತರಲು ಮುಂದಾಗಿದೆ.
ಎನ್ಸಿಇಆರ್ಟಿ ತನ್ನ ಪೋರ್ಟಲ್ಗೆ ಬಂದ ಶಾಲಾ ಶಿಕ್ಷಕರ 221 ಮತ್ತು ಇತರ ಮೂಲಗಳಿಂದ ಬಂದ 1,113 ಸಲಹೆ ಸೂಚನೆಗಳನ್ನು ಪರಿಗಣಿಸಿ ಬದಲಾವಣೆ ತರುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.