ನವದೆಹಲಿ: ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಸ್ಫೂರ್ತಿಯನ್ನು ಶಿಕ್ಷಕರು ಉದ್ದೀಪನಗೊಳಿಸಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು.
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ 219 ಶಿಕ್ಷಕರಿಗೆ ಅವರು ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
‘ವಿದ್ಯಾಲಯಗಳು ದೇವಾಲಯ ಇದ್ದಂತೆ, ಅವುಗಳ ವಾತಾವರಣವನ್ನು ಕಲುಷಿತಗೊಳಿಸಬಾರದು, ನಮ್ಮ ಬೇರುಗಳಿಗೆ ಹಿಂದಿರುಗುವ ಸಮಯ ಬಂದಿದೆ. ನಮ್ಮ ನೆಲದ ಪರಂಪರೆಯನ್ನು ಅರಿತು ಜಗತ್ತಿನೊಂದಿಗೆ ನಾವು ಸ್ಪರ್ಧಿಸಬೇಕಿದೆ’ ಎಂದರು.
ಬಳಿಕ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರೊಂದಿಗೆ ಸಂವಾದ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.