ಲಕ್ನೋ: ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಶಹನ್ಶಾಪುರದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದರು.
ಇಲ್ಲಿ ಅವರು ಪಶುಧನ್ ಆರೋಗ್ಯ ಮೇಳವನ್ನು ಉದ್ಘಾಟಿಸಿದ್ದಾರೆ. ಅಲ್ಲದೇ ರೈತರಿಗೆ ಸಾಲಮನ್ನಾದ ಸರ್ಟಿಫಿಕೇಟ್ಗಳನ್ನು ಹಸ್ತಾಂತರ ಮಾಡಿದ್ದಾರೆ.
ಪಶುಧನ್ ಆರೋಗ್ಯ ಮೇಳವನ್ನು ಆಯೋಜಿಸಿದ್ದ ಸಿಎಂ ಯೋಗಿ ಆದಿತ್ಯನಾಥ ಅವರನ್ನು ಶ್ಲಾಘಿಸಿದ ಮೋದಿ, ಇದರಿಂದ ರೈತರಿಗೆ ಸಾಕಷ್ಟು ಪ್ರಯೋಜನ ಸಿಗಲಿದೆ ಎಂದರು.
ಇದಕ್ಕೂ ಮೊದಲು ಯೋಗಿ ಜೊತೆಗೂಡಿ ಸ್ವಚ್ಛ ಭಾರತ ಅಭಿಯನದಡಿ ಶೌಚಾಲಯಗಳ ಶಂಕುಸ್ಥಾಪನೆ ನೆರವೇರಿಸಿದರು. ಸ್ವಚ್ಛತೆ ನಮ್ಮ ಸ್ವಭಾವವಾಗಬೇಕು, ಸ್ವಚ್ಛ ಭಾರತ ಆರೋಗ್ಯ ಭಾರತವೂ ಆಗುತ್ತದೆ ಎಂದರು.
ನಮಗೆ ವೋಟ್ ಬ್ಯಾಂಕ್ ಅಥವಾ ಚುನಾವಣೆ ಗೆಲ್ಲುವುದು ಮುಖ್ಯವಲ್ಲ, ಅಭಿವೃದ್ಧಿಯೊಂದೇ ಮುಖ್ಯ ಎಂದರು.
ಶಹಜಾನ್ಪುರದ ಗೋಶಾಲೆಯಲ್ಲಿ ಅವರು ಗೋಪೂಜೆಯನ್ನೂ ನೆರವೇರಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.