ಬೆಂಗಳೂರು: 2025ರ ವಿಷನ್ ಫಾರ್ ಕರ್ನಾಟಕ ವಿಷಯದ ಮೇಲೆ ರಾಜ್ಯ ಸರ್ಕಾರ ಮಕ್ಕಳಿಗೆ ಪ್ರಬಂಧ ಮತ್ತು ರಸಪ್ರಶ್ನೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ.
ವಿಷನ್ 2025ಪ್ರಾಜೆಕ್ಟ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ರೇಣುಕಾ ಚಿದಂಬರಂ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
‘ನವ ಕರ್ನಾಟಕ ನಮ್ಮ ಕರ್ನಾಟಕ 2025’ ಮುಂದಿನ 7 ವರ್ಷಕ್ಕೆ ಕರ್ನಾಟಕ ಸರ್ಕಾರದ ಆಡಳಿತ ತಂತ್ರಗಾರಿಕೆಯಾಗಿದೆ. ಇತ್ತೀಚಿಗಷ್ಟೇ ಸರ್ಕಾರ ಇದನ್ನು ಘೋಷಣೆ ಮಾಡಿತ್ತು.
ಇದೀಗ ಸರ್ಕಾರ ಈ ವಿಷಯದ ಬಗ್ಗೆ ಮಕ್ಕಳಿಗೆ ಪ್ರಬಂಧ, ಕ್ವಿಜ್ ಏರ್ಪಡಿಸಿ ಆಕರ್ಷಕ ಬಹುಮಾನಗಳನ್ನು ನೀಡಲು ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.