ನವದೆಹಲಿ: ಕೇಂದ್ರ ಸರ್ಕಾರ ತನ್ನ ‘ಗರೀಬ್ ನವಾಝ್’ ಕೌಶಲ್ಯಾಭಿವೃದ್ಧಿ ಸೆಂಟರ್ಗಳಲ್ಲಿ ’ನೈರ್ಮಲ್ಯ ಮೇಲ್ವಿಚಾರಣಾ’ ಕೋರ್ಸ್ ಗಳನ್ನು ನೀಡಲು ಮುಂದಾಗಿದೆ.
ಈ ಬಗ್ಗೆ ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಘೋಷಣೆ ಮಾಡಿದ್ದು, ಈ ಕೋರ್ಸಿನಿಂದಾಗಿ ಅಲ್ಪಸಂಖ್ಯಾತ ಸಮುದಾಯದ ಬಡ ಯುವಕರಿಗೆ ಉದ್ಯೋಗ ಗಿಟ್ಟಿಸಲು ಸಹಾಯಕವಾಗಲಿದೆ ಎಂದಿದ್ದಾರೆ.
ಅಲ್ಲದೇ ಈ ಕೋರ್ಸ್ ನಿಂದ ‘ಸ್ವಚ್ಛ ಭಾರತ ಅಭಿಯಾನ’ವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಕೋರ್ಸ್ ನೂತನ ತಂತ್ರಜ್ಞಾನ, ನೂತನ ಮೆಶಿನ್ನೊಂದಿಗೆ ಸ್ವಚ್ಛತೆ ಮಾಡುವ ತರಬೇತಿಯನ್ನು ನೀಡಲಿದೆ, ಕಾಂಪೋಸ್ಟ್ ಗೊಬ್ಬರ ತಯಾರಿಕೆ ವಿಧಾನವನ್ನು ಕಲಿಸಿಕೊಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.