News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಾಗಲಕೋಟೆಯಲ್ಲಿ ಆರ್‌ಎಸ್‌ಎಸ್ ಪಥಸಂಚಲನ

ಬಾಗಲಕೋಟೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ನಗರ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಭಾನುವಾರ ಗಣವೇಷಧಾರಿಗಳ ಆಕರ್ಷಕ ಪಥ ಸಂಚಲನ ನಡೆಯಿತು.

ನಗರದ ಬಸವೇಶ್ವರ ಮೈದಾನದಿಂದ ಎರಡು ಮಾರ್ಗಗಳಲ್ಲಿ ಸಂಜೆ 4 ಕ್ಕೆ ಆರಂಭಗೊಂಡ ಪಥಸಂಚಲನಕ್ಕೆ ನಗರದ ಜನತೆ ಪುಷ್ಪವೃಷ್ಟಿ ಸ್ವಾಗತ ಕೋರಿದರು. ಪಥಸಂಚಲನ ಎರಡೂ ಮಾರ್ಗಗಳ ಇಕ್ಕೆಲಗಳಲ್ಲಿ ನಿಂತಿದ್ದ ಭಾರಿ ಜನಸ್ತೋಮ ಘೋಷವಾಕ್ಯಗಳೊಂದಿಗೆ ಪಥ ಸಂಚಲನಕ್ಕೆ ಸಾಥ್ ನೀಡಿದರು.

ಎರಡೂ ಮಾರ್ಗಗಳಲ್ಲಿ ಹೋರಟ ಪಥ ಸಂಚಲನ ಬಸವೇಶ್ವರ ವೃತ್ತದಲ್ಲಿ ಒಂದಾಗಿ ಕಾಲೇಜ್ ಮೈದಾನದತ್ತ ಸಾಗುವ ಸಾಗರೋತ್ಸಾಹದ ನೋಟ ಕಣ್ತುಂಬಿಕೊಳ್ಳಲು ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರಿತ್ತು. ಎರಡೂ ಮಾರ್ಗಗಳಲ್ಲಿಯ ಪಥಸಂಚಲನ ತಂಡ ಬಸವೇಶ್ವರ ವೃತ್ತದಲ್ಲಿ ಒಂದಾಗುತ್ತಲೇ ನಡೆದ ಪುಷ್ಟವೃಷ್ಠಿ ಸನ್ನಿವೇಶ, ಮುಗಿಲು ಮುಟ್ಟಿದ ಘೋಷಣೆಗಳು ರೋಮಾಂಚನ ಸನ್ನಿವೇಶ ನಿರ್ಮಿಸಿದ್ದವು.

ಪಥಸಂಚಲನ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವ್ಯಾಪಾರಸ್ಥರು, ಸಾರ್ವಜನಿಕರು, ಮಹಿಳೆಯರು, ಮಕ್ಕಳು ಪಥಸಂಚಲನ ನೋಡಲು ಬಸವೇಶ್ವರ ವೃತ್ತದ ಬಳಿ ಸೇರಿದ್ದರು. ಜತೆಗೆ ಮಾರ್ಗದುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಪಥಸಂಚಲನವನ್ನು ಅದ್ಧೂರಿಯಿಂದ ಸ್ವಾಗತಿಸಿದರು. ಪಥ ಸಂಚಲನ ವೀಕ್ಷಣೆಗೆ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ನಾನಾ ಕಡೆಗಳಿಂದ ಅಭಿಮಾನಿಗಳು ಭಾಗವಹಿಸಿದ್ದರು.

ಸಂಸದ ಪಿ.ಸಿ.ಗದ್ದಿಗೌಡರ, ಮೇಲ್ಮನೆ ಸದಸ್ಯ ಎಚ್.ಆರ್. ನಿರಾಣಿ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಮೇಲ್ಮನೆ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಮಾಜಿ ಸಚಿವ ಮುರಗೇಶ ನಿರಾಣಿ, ನಗರಸಭೆ ಅಧ್ಯಕ್ಷ ದ್ಯಾವಪ್ಪ ರಾಯಕುಂಪಿ ಇತರರು ಇದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top