ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ದಕ್ಷಿಣಕನ್ನಡದ ಪ್ರಸಿದ್ಧ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಭಾರೀ ಬಿಗಿ ಭದ್ರತೆಯನ್ನು ಮಾಡಲಾಗಿದ್ದು, ಸಂಚಾರಿ ವ್ಯವಸ್ಥೆಯಲ್ಲೂ ಹಲವಾರು ಮಾರ್ಪಾಟುಗಳನ್ನು ಮಾಡಲಾಗಿದೆ.
ಸಾಂಪ್ರದಾಯಿಕ ಪದ್ಧತಿಗಳನ್ನು ಅನುಸರಿಸಿಯೇ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ಅವರು ಪಡೆಯಲಿದ್ದಾರೆ. ಬಳಿಕ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಅವರು ಭಾಗಿಯಾಗಲಿದ್ದಾರೆ.
ಧರ್ಮಸ್ಥಳ-ಉಜಿರೆ ನಡುವಣ ಸಂಚಾರ ನಾಳೆ ಬೆಳಿಗ್ಗೆ 9 ಗಂಟೆಯಿಂದ ಸ್ಥಗಿತವಾಗಲಿದೆ. ಸಾರ್ವಜನಿಕ ಸಭೆಗೆ ಆಗಮಿಸುವವರಿಗೆ ಬೆಳಾಲು ರಸ್ತೆಯ ಮೂಲಕ ಕ್ರೀಡಾಂಗಣಕ್ಕೆ ಆಗಮಿಸಲು ಪರ್ಯಾಯ ಮಾರ್ಗವನ್ನು ಕಲ್ಪಿಸಿಕೊಡಲಾಗಿದೆ.
ಈಗಾಗಲೇ ಪ್ರಧಾನಿಯವರ ಬಳಕೆಗಾಗಿ ದೆಹಲಿಯಿಂದ ವಿಶೇಷ ಬುಲೆಟ್ ಪ್ರೂಫ್ ಕಾರನ್ನು ವಾಯುಪಡೆಯ ವಿಮಾನದ ಮೂಲಕ ಮಂಗಳೂರು ಏರ್ಪೋರ್ಟ್ಗೆ ತರಲಾಗಿದೆ. ಭಾನುವಾರು ಬೆಳಿಗ್ಗೆ ಈ ಕಾರು ಧರ್ಮಸ್ಥಳವನ್ನು ತಲುಪಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.