ನವದೆಹಲಿ: ಸ್ಥಳಿಯ ಜನರಿಗೆ ಪ್ರೇರಕವಾಗುವ ಸಲುವಾಗಿ ಭಾರತದಲ್ಲಿ ‘ಮಾದರಿ ಗ್ರಾಮ’ಗಳ ರಚನೆಯತ್ತ ಹೆಚ್ಚು ಗಮನ ನೀಡುವಂತೆ ಗೃಹಸಚಿವ ರಾಜನಾಥ್ ಸಿಂಗ್ ಅವರು ಮೈಕ್ರೋಸಾಫ್ಟ್ ಸಂಸ್ಥಾಪಕ ಮತ್ತು ಬಿಲ್&ಮಿಲಿಂಡ ಗೇಟ್ಸ್ ಫೌಂಡೇಶನ್ ಮುಖ್ಯಸ್ಥ ಬಿಲ್ ಗೇಟ್ಸ್ ಅವರಿಗೆ ಮನವಿ ಮಾಡಿದ್ದಾರೆ.
ಬಿಲ್ ಗೇಟ್ಸ್ರನ್ನು ಭೇಟಿಯಾದ ಸಿಂಗ್, ಭಾರತದಲ್ಲಿ ಆರೋಗ್ಯ ಅರಿವು ಕಾರ್ಯಕ್ರಮಗಳನ್ನೂ ಆಯೋಜಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಗ್ರಾಮಗಳ ಅಭಿವೃದ್ಧಿಗೆ ಬಿಲ್& ಮಿಲಿಂಡ ಫೌಂಡೇಶನ್ ಹೆಚ್ಚಿನ ಗಮನ ಕೊಟ್ಟು, ಅವುಗಳನ್ನು ಮಾದರಿಯನ್ನಾಗಿಸ ಬೇಕು ಎಂದಿದ್ದಾರೆ.ಅಲ್ಲದೇ ಈ ಫೌಂಡೇಶನ್ ಭಾರತದಲ್ಲಿ ಹಮ್ಮಿಕೊಳ್ಳುತ್ತಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಶ್ಲಾಘಿಸಿದ್ದಾರೆ.
ಭಾರತದ ಅಭಿವೃದ್ಧಿಗೆ ಸಕ್ರಿಯ ಸಹಕಾರ ನೀಡುವುದಾಗಿ ಬಿಲ್ ಗೇಟ್ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.