ಕೊಯಂಬತ್ತೂರು: ತಮಿಳುನಾಡಿನಲ್ಲಿ ಅಮ್ಮ ಎಂದೇ ಖ್ಯಾತರಾಗಿದ್ದ ಜೆ.ಜಯಲಲಿತಾ ಅವರು ವಿಧಿವಶರಾಗಿ ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನಲೆಯಲ್ಲಿ ಅವರ ಪಕ್ಷ ಎಐಎಡಿಎಂಕೆ ಕಾರ್ಯರ್ತರು ಅವರ ಬೃಹತ್ ಕಂಚಿನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಿದ್ದಾರೆ.
ಕೊಯಂಬತ್ತೂರಿನ ಅವಿನಾಶ್ ರೋಡ್ ಸಮೀಪ ಸಿ.ಎನ್.ಅಣ್ಣದುರೈ ಪ್ರತಿಮೆಯ ಸಮಿಪ ಇಂದು ಜಯಲಲಿತಾ ಹಾಗೂ ಎಂ.ಜಿ.ರಾಮಚಂದ್ರನ್ ಅವರ ಪ್ರತಿಮೆಯನ್ನು ಪ್ರತಿಷ್ಠಾಪನೆಗೊಳಿಸಲಾಯಿತು.
ಯಾವುದೇ ಸುದ್ದಿಯಿಲ್ಲದೆ ಸರ್ಪ್ರೈಸ್ ಆಗಿ ಈ ಪ್ರತಿಮೆಯನ್ನು ಅನಾವರಣಗೊಳಿಸಿದ್ದು ವಿಶೇಷ. ಕಳೆದ ವರ್ಷ ಡಿಸೆಂಬರ್.೫ರಂದು ಜಯಲಲಿತಾ ವಿಧಿವಶರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.