ಬೆಂಗಳೂರು: ನಿರಂತರ ಹಿಂದೂ ಕಾರ್ಯಕರ್ತರ ಹತ್ಯೆಯಿಂದಾಗಿ ಕರ್ನಾಟಕ ಮತ್ತೊಂದು ಕಾಶ್ಮೀರವಾಗಿ ಪರಿವರ್ತನೆಯಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಪಿ.ಮುರಳೀಧರ್ ರಾವ್ ಆರೋಪಿಸಿದ್ದಾರೆ.
‘ಕರ್ನಾಟಕ ಮತ್ತೊಂದು ಕಾಶ್ಮೀರವಾಗುತ್ತಿದೆ. ಆಯ್ದ 15 ಹಿಂದೂಗಳನ್ನು ಕೊಲೆ ಮಾಡಲಾಗಿದೆ, ಇದರಲ್ಲಿ ಅಂತಾರಾಷ್ಟ್ರೀಯ ನೆಟ್ವರ್ಕ್ಗಳ ಕೈವಾಡವಿದೆ. ಆದರೆ ಇಲ್ಲಿನ ಸರ್ಕಾರ ಅವರ ಹಣಕಾಸು ನೆಟವರ್ಕ್ನ್ನಾಗಲಿ ಅಥವಾ ತರಬೇತಿ ಮಾದರಿಯನ್ನಾಗಲಿ ಬಹಿರಂಗಪಡಿಸುತ್ತಿಲ್ಲ’ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿಯೂ ಆಗಿರುವ ಅವರು ಇಲ್ಲಿನ ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.