ಲಕ್ನೋ: ಭೂ ಮಾಫಿಯಾ, ಗಣಿ ಮಾಫಿಯಾ ಮತ್ತು ಯೋಜಿತ ಅಪರಾಧಗಳನ್ನು ಹತ್ತಿಕ್ಕುವ ಸಲುವಾಗಿ ಉತ್ತರಪ್ರದೇಶ ಕಠಿಣ ಕಾನೂನನ್ನು ಜಾರಿಗೊಳಿಸುತ್ತಿದ್ದು, ಇದಕ್ಕೆ ಸಚಿವ ಸಂಪುಟ ಗುರುವಾರ ಅನುಮೋದನೆಯನ್ನು ನೀಡಿದೆ.
ಉತ್ತರಪ್ರದೇಶ ಯೋಜಿತ ಅಪರಾಧ ನಿಯಂತ್ರಣ ಕಾಯ್ದೆಗೆ ಅನುಮೋದನೆ ಸಿಕ್ಕಿದ್ದು, ಮುಂದಿನ ವಿಧಾನಸಭಾ ಚಳಿಗಾಲದ ಅಧಿವೇಶನದಲ್ಲಿ ಈ ಕಾಯ್ದೆ ಜಾರಿಗೆ ಬರುವ ನಿರೀಕ್ಷೆ ಇದೆ.
ಮಾಫಿಯಾ, ಗೂಂಡಾಗಿರಿ, ಅಶಾಂತಿ ಸೃಷ್ಟಿಸುವವರ ವಿರುದ್ಧ ಸಮರವನ್ನು ಸಾರಲು ಈ ಕಾಯ್ದೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಯುಪಿ ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.