ನವದೆಹಲಿ: ಕಲಾಪಗಳಲ್ಲಿ ಕೇಳುವ ಪ್ರಶ್ನೆಗಳು ನೇರ, ಸ್ಪಷ್ಟವಾಗಿರಬೇಕು ಮತ್ತು ಉತ್ತರಗಳು ತೀಕ್ಷ್ಣವಾಗಿರಬೇಕು, ಇದರಿಂದ ಪ್ರಶೋತ್ತರ ಅವಧಿಯನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲು ಸಾಧ್ಯ ಎಂದು ವೆಂಕಯ್ಯನಾಯ್ಡು ಅವರು ರಾಜ್ಯಸಭಾ ಸದಸ್ಯರಿಗೆ ಸಲಹೆ ನೀಡಿದ್ದಾರೆ.
ಕೆಲವರು ಪ್ರಶ್ನೆಗಳನ್ನು ದೀರ್ಘವಾಗಿ ಕೇಳುವ ಹಿನ್ನಲೆಯಲ್ಲಿ ಅವರು ಈ ಸಲಹೆಗಳನ್ನು ನೀಡಿದ್ದಾರೆ. ಮೇಲ್ಮನೆಯ ವ್ಯವಹಾರ ಸಲಹಾ ಸಮಿತಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಅವರಿಗೆ ತಿಳಿಸಿದರು.
ಉತ್ತರಗಳು ಮತ್ತು ಪ್ರಶ್ನೆಗಳು ದೀರ್ಘವಾಗಿ ಇರಬಾರದು, ವಿಷಯವನ್ನು ನೇರವಾಗಿ, ಸ್ಪಷ್ಟವಾಗಿ ತಿಳಿಸಬೇಕು, ಬೇಕಾದರೆ ಮತ್ತೆ ಚರ್ಚೆಯ ಸಂದರ್ಭದಲ್ಲಿ ವಿಷಯಗಳನ್ನು ವಿವರಿಸಬಹುದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.