ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳನ್ನು ಗೆದ್ದ ಬಳಿಕ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಕರ್ನಾಟಕದತ್ತ ಚಿತ್ತ ನೆಟ್ಟಿದ್ದಾರೆ.
ಬುಧವಾರ ಸಚಿವರಾದ ಪ್ರಕಾಶ್ ಜಾವ್ಡೇಕರ್, ಅನಂತ್ ಕುಮಾರ್ ಹೆಗ್ಡೆ, ರಾಜ್ಯ ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿಯಾದ ಷಾ ಕರ್ನಾಟಕ ವಿಧಾನಸಭಾ ಚುನಾವಣೆಗೆ ರೂಪುರೇಷೆ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.
ಪ್ರಧಾನಿಗಳು ಮೊನ್ನೆ ಮಂಗಳೂರಿಗೆ ಆಗಮಿಸಿ ತಂಗಿದ್ದು ಕೂಡ ಬಿಜೆಪಿ ಕರ್ನಾಟಕದ ಮೇಲೆ ತೀಕ್ಷ್ಣ ನೋಟ ಬೀರಿದೆ ಎಂಬುದನ್ನು ತಿಳಿಸುತ್ತದೆ.
ಇತ್ತೀಚಿಗೆ ಕರ್ನಾಟಕಕ್ಕೆ ಆಗಮಿಸಿದ್ದ ಷಾ ಅವರು ಬಿಜೆಪಿ ನಾಯಕರಿಗೆ ಚುರುಕು ಮುಟ್ಟಿಸಿದ್ದರು, ಮಾತ್ರವಲ್ಲದೇ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸುವಂತೆ ಹೇಳಿದ್ದರು.
ಒಟ್ಟಿನಲ್ಲಿ ದೇಶದೆಲ್ಲೆಡೆ ವಿಜಯ ಪತಾಕೆ ಹಾರಿಸುತ್ತಿರುವ ಬಿಜೆಪಿ ರಾಜ್ಯದಲ್ಲೂ ಇದನ್ನು ಮುಂದುವರೆಸುತ್ತದೆಯೇ ಎಂಬುದನ್ನು ಕಾದು ನೋಡಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.