ಮಂಗಳೂರು: ಮತಾಂಧರ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ಕಾಟಿಪಳ್ಳ ನಿವಾಸಿ ದೀಪಕ್ ರಾವ್ ಹತ್ಯೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟಿಸಲು ಹಿಂದೂ ಕಾರ್ಯಕರ್ತರು, ಬಿಜೆಪಿ ಸಜ್ಜಾಗಿದೆ.
ಬುಧವಾರ ಮಧ್ಯಾಹ್ನ ಕಾಟಿಪಳ್ಳ ಪ್ರದೇಶದಲ್ಲಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ದೀಪಕ್ರನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದರು. ತಕ್ಷಣವೇ ಶವವನ್ನು ಎಜೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಇಂದು ಹಿಂದೂ ಕಾರ್ಯಕರ್ತರು ಮೆರವಣಿಗೆ ಮೂಲಕ ಅವರ ಶವವನ್ನು ಕಾಟಿಪಳ್ಳದ ಅವರ ನಿವಾಸಕ್ಕೆ ತರಲು ನಿರ್ಧರಿಸಿದ್ದರು.
ಆದರೆ ಪೊಲೀಸರು ಇದಕ್ಕೆ ಆಸ್ಪದ ನೀಡದೆ ಶವವನ್ನು ಏಕಾಏಕಿ ಯಾರಿಗೂ ತಿಳಿಸದೆ ತೆಗೆದುಕೊಂಡು ದೀಪಕ್ ನಿವಾಸಕ್ಕೆ ಆಗಮಿಸಿದ್ದಾರೆ. ಆದರೆ ಕುಟುಂಬಸ್ಥರು ಮತ್ತು ಅಲ್ಲಿ ನೆರೆದಿರುವ ಸಾಕಷ್ಟು ಸಂಖ್ಯೆಯ ಜನರು ಅಂಬ್ಯುಲೆನ್ಸ್ನಿಂದ ಶವವನ್ನು ಕೆಳಗಿಳಿಸಲು ಬಿಡದೆ ಗೃಹಸಚಿವರು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.
ಈ ಘಟನೆಯನ್ನು, ಪೊಲೀಸರ ಅಮಾನವೀಯ ಕ್ರಮವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಜ್ಜಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.