ನವದೆಹಲಿ: ಕೇರಳದಲ್ಲಿ ಗಣರಾಜ್ಯೋತ್ಸವದಂದು ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಕೇರಳದ ಪಲ್ಲಕಾಡ್ನ ಹೊರವಲಯದಲ್ಲಿನ ಶಾಲೆಯೊಂದರಲ್ಲಿ ಅವರು ಜ.26ರಂದು ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ. ಅಲ್ಲದೇ ಜ.26ರಿಂದ ಅವರು ಅದೇ ಶಾಲೆಯಲ್ಲಿ ಜರುಗಲಿರುವ 3 ದಿನಗಳ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದಂದು ಭಾಗವತ್ ಅವರು ಎಲ್ಲೇ ಇದ್ದರು ಅಲ್ಲಿ ರಾಷ್ಟ್ರಧ್ವಜವನ್ನು ಹಾರಿಸುತ್ತಾರೆ. ಈ ಬಾರಿ ಅವರು ಕೇರಳದಲ್ಲಿ ಇರಲಿದ್ದಾರೆ. ಹೀಗಾಗಿ ಅಲ್ಲೇ ಧ್ವಜಾರೋಹಣ ನೆರವೇರಿಸುತ್ತಾರೆ ಎಂದು ಆರ್ಎಸ್ಎಸ್ ಮೂಲಗಳು ತಿಳಿಸಿವೆ.
ಆರ್ಎಸ್ಎಸ್ನ ಭಾರತೀಯ ವಿದ್ಯಾ ನಿಕೇತನ ಮೂರು ದಿನಗಳ ಶಿಬಿರವನ್ನು ಕೇರಳದ ಶಾಲೆಯಲ್ಲಿ ಆಯೋಜನೆಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.