ನವದೆಹಲಿ: ಧರ್ಮ ಧರ್ಮಗಳ ನಡುವೆ ಸಹಿಷ್ಣುತೆಯನ್ನು ತರುವ ಸಲುವಾಗಿ ಭಗವದ್ಗೀತೆ, ಕುರಾನ್, ಬೈಬಲ್ ಸೇರಿದಂತೆ 6 ಪ್ರಮುಖ ಧರ್ಮಗಳ ಧರ್ಮಗ್ರಂಥಗಳ ಸಾರವನ್ನು ಶಾಲಾ ಮಕ್ಕಳಿಗೆ ಕಲಿಸಿಕೊಡಬೇಕಾದ ಅಗತ್ಯವಿದೆ ಎಂದು ಕೇಂದ್ರ ಸಚಿವೆ ಮೇನಕಾ ಗಾಂಧಿ ಪ್ರತಿಪಾದಿಸಿದ್ದಾರೆ.
‘ಇಂದಿನ ದಿನಗಳಲ್ಲಿ ಧರ್ಮ ಸಂಬಂಧಿತ ಸಮಸ್ಯೆಗಳಿವೆ. ಮಕ್ಕಳು ಸರಿಯಾಗಿ ತಮ್ಮ ಧರ್ಮವನ್ನು ಅರ್ಥ ಮಾಡಿಕೊಳ್ಳದೆ ಇರುವುದು ಕೂಡ ಇದಕ್ಕೆ ಒಂದು ಕಾರಣ. ಹಿಂದೂ, ಬೌದ್ಧ, ಜೈನ, ಸಿಖ್, ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳ ಪ್ರಮುಖ ತತ್ವಗಳನ್ನು ತಿಳಿದುಕೊಳ್ಳುವುದರಿಂದ ಎಳೆ ವಯಸ್ಸಿನಲ್ಲೇ ಧಾರ್ಮಿಕ ಸಹಿಷ್ಣುತೆ ಬೆಳೆಯುತ್ತದೆ’ ಎಂದು ಅವರು ಅಭಿಪ್ರಾಯಿಸಿದ್ದಾರೆ.
6 ಧರ್ಮಗಳ ಧರ್ಮಗ್ರಂಥಗಳನ್ನು ತಿಳಿಸಿಕೊಡುವ ತರಗತಿಗಳನ್ನು ವಾರಕ್ಕೆ ಎರಡು ಬಾರಿಯಾದರೂ ನಡೆಸುವ ಬಗ್ಗೆ ಸಿಬಿಎಸ್ಸಿ ಮಾನಸಂಪನ್ಮೂಲ ಸಚಿವಾಲಯಕ್ಕೆ ಮನವಿ ಮಾಡಬೇಕು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.