ಮುಂಬಯಿ: ಪ್ರಧಾನ ಮಂತ್ರಿ ಜನ್ಧನ್ ಯೋಜನೆಯನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಮೂಲಕ ಇನ್ನಷ್ಟು ಹಣವನ್ನು ಕ್ರೋಢೀಕರಿಸಿ ಅದನ್ನು ಉದ್ದಿಮೆಗಳನ್ನು ಉತ್ತೇಜಿಸುವ ಸಲುವಾಗಿ ಸಾಲ ನೀಡುವುದಕ್ಕೆ ವಿನಿಯೋಗಿಸಲು ನಿರ್ಧರಿಸಿದೆ.
2014ರಲ್ಲಿ ಆರಂಭಿಸಲಾದ ಜನ್ಧನ್ ಯೋಜನೆ, ಪ್ರಧಾನಿ ನರೇಂದ್ರ ಮೊದಿಯವರ ಮಹತ್ವಾಕಾಂಕ್ಷೆಯ ಯೋಜನೆ. ಬ್ಯಾಂಕ್ಗೆ ತಲುಪದ ಜನರನ್ನು ಬ್ಯಾಂಕಿಂಗ್ನತ್ತ ಮುಖ ಮಾಡುವಂತೆ ಮಾಡುವುದೇ ಈ ಯೋಜನೆಯ ಉದ್ದೇಶವಾಗಿತ್ತು. ಶೂನ್ಯ ಬ್ಯಾಲೆನ್ಸ್ ಮೂಲಕವೂ ಖಾತೆ ತೆರೆಯಬಹುದು.
ಈ ವರ್ಷದ ಬಜೆಟ್ನಲ್ಲಿ ಈ ಯೋಜನೆ ಮತ್ತೆ ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.