ಶ್ರೀನಗರ: ನೀಚ ಪಾಕಿಸ್ಥಾನ ತನ್ನ ಪಾಪಕೃತ್ಯವನ್ನು ಮುಂದುವರೆಸಿದೆ. ಜಮ್ಮು ಕಾಶ್ಮೀರದ ರಜೌರಿ ಸೆಕ್ಟರ್ನಲ್ಲಿ ಅದು ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಗೆ ಒರ್ವ ಕ್ಯಾಪ್ಟನ್ ಸೇರಿದಂತೆ ಒಟ್ಟು 4 ಯೋಧರು ಭಾನುವಾರ ಹುತಾತ್ಮರಾಗಿದ್ದಾರೆ.
ಹುತಾತ್ಮರನ್ನು ಕ್ಯಾಪ್ಟನ್ ಕಪಿಲ್ ಚಂದ್ರು, ಹವಲ್ದಾರ್ ರೋಹನ್ ಲಾಲ್, ರೈಫಲ್ ಮ್ಯಾನ್ ರಾಮ್ ಅವತಾರ್, ಶುಭಂ ಸಿಂಗ್ ಎಂದು ಹೇಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಅಹಿರ್, ‘ಪಾಕ್ನ ಈ ಕೃತ್ಯವನ್ನು ಮರೆಯೋದಿಲ್ಲ. ಅದು ತನ್ನ ಮೂರ್ಖತನವನ್ನು ಅರ್ಥ ಮಾಡಿಕೊಳ್ಳುವಂತೆ ಮಾಡುತ್ತೇವೆ, ಈ ಕೃತ್ಯಕ್ಕೆ ತಕ್ಕ ಶಾಸ್ತಿಯನ್ನು ಅದು ಎದುರಿಸಲಿದೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.