ನವದೆಹಲಿ: ದೇಶದ ಒಟ್ಟು 25 ಮುಖ್ಯಮಂತ್ರಿಗಳು ಕೋಟ್ಯಾಧಿಪತಿಗಳಾಗಿದ್ದಾರೆ, 11 ಮುಖ್ಯಮಂತ್ರಿಗಳು ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ನೂತನ ವರದಿಯೊಂದು ತಿಳಿಸಿದೆ.
ಅಸೋಸಿಯೇಶನ್ ಫಾರ್ ಡೆಮಾಕ್ರಾಟಿಕ್ ರಿಫಾರ್ಮ್ಸ್ ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ ಜಂಟಿಯಾಗಿ ಪ್ರಸ್ತುತ ದೇಶದಲ್ಲಿನ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಮುಖ್ಯಮಂತ್ರಿಗಳ ಬಗ್ಗೆ ಸಮೀಕ್ಷೆ ಹಮ್ಮಿಕೊಂಡಿತ್ತು.
ಕೇರಳದ ಪಿನರಾಯಿ ವಿಜಯನ್, ಬಿಹಾರದ ನಿತೀಶ್ ಕುಮಾರ್, ಯುಪಿಯ ಯೋಗಿ ಆದಿತ್ಯನಾಥ, ದೆಹಲಿಯ ಅರವಿಂದ್ ಕೇಜ್ರಿವಾಲ್ ವಿರುದ್ಧ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಿವೆ.
ಒಟ್ಟು 31 ಮುಖ್ಯಮಂತ್ರಿಗಳ ಪೈಕಿ 11 ಮಂದಿ ವಿರುದ್ಧ ಕ್ರಮಿನಲ್ ಪ್ರಕರಣಗಳಿವೆ, ಇದರಲ್ಲಿ 8 ಮಂದಿ ವಿರುದ್ಧ ಗಂಭೀರ ಪ್ರಕರಣಗಳಿವೆ.
177 ಕೋಟಿ ರೂ. ಮೌಲ್ಯದ ಆಸ್ತಿಯ ಒಡೆಯನಾಗಿರುವ ಆಂಧ್ರದ ಚಂದ್ರಬಾಬು ನಾಯ್ಡು ಅವರು ಮೊದಲನೇ ಸ್ಥಾನದಲ್ಲಿದ್ದಾರೆ, ಅರುಣಾಚಲದ ಪೆಮಾ ಖಂಡು, ಪಂಜಾಬ್ನ ಅಮರೀಂದರ್ ಸಿಂಗ್ ಶ್ರೀಮಂತ ಸಿಎಂಗಳಾಗಿದ್ದಾರೆ. ಕರ್ನಾಟಕ ಸಿಎಂ ಸಿದ್ದರಾಮಯ್ಯ 13 ಕೋಟಿ ರೂ. ಮೌಲ್ಯದ ಆಸ್ತಿಯ ಒಡೆಯನಾಗಿದ್ದು ಈ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದಾರೆ.
ತ್ರಿಪುರಾದ ಮಾಣಿಕ್ ಸರ್ಕಾರ್, ಪ.ಬಂಗಾಳದ ಮಮತಾ ಬ್ಯಾನರ್ಜಿ, ಜ.ಕಾಶ್ಮೀರದ ಮೆಹಬೂಬ ಮುಫ್ತಿ, ರಾಜಸ್ಥಾನದ ವಸುಂಧರಾ ರಾಜೆ ಬಡ ಸಿಎಂಗಳ ಪಟ್ಟಿಯಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.