ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ‘ಎಲ್ಪಿಜಿ ಪಂಜಾಯತ್’ನ್ನು ಆಯೋಜನೆಗೊಳಿಸಿದ್ದರು.
ಎಲ್ಪಿಜಿ ಗ್ರಾಹಕರಿಗೆ ಪರಸ್ಪರ ಅನುಭವ ಹಂಚಿಕೊಳ್ಳಲು, ಸಂವಾದ ನಡೆಸಲು ಅವಕಾಶ ಕಲ್ಪಿಸಿಕೊಡುವ ಸಲುವಾಗಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಈ ಕಾರ್ಯಕ್ರಮವನ್ನು ಏರ್ಪಡಿಸಿತ್ತು.
ಪ್ರತಿ ಎಲ್ಪಿಜಿ ಪಂಚಾಯತ್ನಲ್ಲೂ ತಲಾ 10ಎಲ್ಪಿಜಿ ಗ್ರಾಹಕರಿದ್ದರು, ತಮ್ಮ ತಮ್ಮ ಅನುಭವಗಳನ್ನು ಹಂಚಿಕೊಂಡರು. ಸುರಕ್ಷಿತ ಮತ್ತು ಸ್ಥಿರ ಎಲ್ಪಿಜಿ ಬಳಕೆಯ ಬಗ್ಗೆ ಚರ್ಚಿಸಿದರು.
2019ರ ಮಾರ್ಚ್ 31ರೊಳಗೆ ದೇಶದಾದ್ಯಂತ ಇಂತಹ 1 ಲಕ್ಷ ಎಲ್ಪಿಜಿ ಪಂಚಾಯತ್ಗಳನ್ನು ಆಯೋಜನೆಗೊಳಿಸಲು ಸಚಿವಾಲಯ ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.