News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನರೇಂದ್ರ ಪದವಿ ಪೂರ್ವ ಕಾಲೇಜು, ಪುತ್ತೂರು : ಉದ್ದೇಶಿತ ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

ನರೇಂದ್ರ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಉದ್ದೇಶಿತ ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಇಂದು (ಫೆ. 17) ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ಕೌಶಲ್ಯ ಅಭಿವೃದ್ಧಿ ಹಾಗೂ ವಾಣಿಜ್ಯೋದ್ಯಮ ಸಚಿವರಾದ ಶ್ರೀ ಅನಂತಕುಮಾರ್ ಹೆಗಡೆ ಅವರು ನೆರವೇರಿಸಿದರು. ತದ ನಂತರ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವು ಜರುಗಿತು.

10

12

14

19

9

20

1

3

4

5

7

8

ಸಭೆಯ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ದ ಅಧ್ಯಕ್ಷರಾಗಿರುವ ಡಾ| ಪ್ರಭಾಕರ ಭಟ್ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಚಿವ ಅನಂತಕುಮಾರ್ ಹೆಗಡೆ ಉಪಸ್ಥಿತರಿದ್ದರು. ಅದೇ ರೀತಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ.)ದ ಕಾರ್ಯದರ್ಶಿಗಳಾದ ಡಾ| ಕೆ ಎಮ್.ಕೃಷ್ಣ ಭಟ್ , ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೂಪಲೇಖಾ, ಸಂಚಾಲಕರಾದ ವಿಜಯಕೃಷ್ಣ ಭಟ್. ಡಿ., ಹಾಗೂ ಪ್ರಾಂಶುಪಾಲರಾದ ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಸಚಿವ ಅನಂತ ಕುಮಾರ್ ಹೆಗಡೆ ಇವರು ಮಕ್ಕಳಲ್ಲಿ ಕ್ರಿಯಾಶೀಲತೆಯನ್ನು ಬೆಳೆಸುವ ಶಿಕ್ಷಣದ ಕುರಿತು ಮಾಹಿತಿಯನ್ನು ನೀಡಿದರು. ಅದೇ ರೀತಿ 3D ಪ್ರಿಂಟಿಂಗ್, VERTICAL FARMING, DISTANCE EDUCATION, SMART TECHNOLOGYಯನ್ನು ಯಾವ ರೀತಿ ಶಿಕ್ಷಣದಲ್ಲಿ ಉಪಯೋಗಿಸಬಹುದು ಎಂಬ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷೀಯ ಭಾಷಣವನ್ನು ಮಾಡಿದರು.

ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಶ್ರೀಮತಿ ರೂಪಲೇಖಾರವರು ಸ್ವಾಗತ ಭಾಷಣ ಮಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ಮಾಡಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅನಿಲ್ ಕುಮಾರ್ ಧನ್ಯವಾದ ಸಮರ್ಪಣೆ ಮಾಡಿದರು. ಹಾಗೆಯೇ ನರೇಂದ್ರ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ರಶ್ಮಿ ಎ. ಹಾಗೂ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ವಿನಯಾ ಬಿ ಇವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top