ಸುಬ್ರಹ್ಮಣ್ಯ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಂಗಳವಾರ ಬೆಳಿಗ್ಗೆ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ.
ಸೋಮವಾರ ರಾತ್ರಿ ಕುಕ್ಕೆಗೆ ಅವರು ಆಗಮಿಸಿದ್ದು, ಚೆಂಡೆ ಮದ್ದಳೆಯ ಮೂಲಕ ಅವರಿಗೆ ಸ್ವಾಗತವನ್ನು ಕೋರಲಾಗಿತ್ತು. ಬಳಿಕ ರಾತ್ರಿ ಆದಿಶೇಷ ವಸತಿಗೃಹದಲ್ಲಿ ಅವರು ತಂಗಿದ್ದರು.
ಇಂದು ಬೆಳಿಗ್ಗೆ ಸ್ವಾಮಿ ಸುಬ್ರಹ್ಮಣ್ಯನಿಗೆ ಅವರು ವಿಶೇಷ ಪೂಜೆಯನ್ನು ಸಲ್ಲಿಕೆ ಮಾಡಿದರು. ಬಳಿಕ ಅವರು ವಿದ್ಯಾಪ್ರಸನ್ನ ಸ್ವಾಮೀಜಿಗಳನ್ನು ಭೇಟಿಯಾದರು. ಅವರು ಜ್ವರದಿಂದ ಬಳಲುತ್ತಿರುವ ಕಾರಣದಿಂದಾಗಿ ಅವರ ಕಾರ್ಯದ ವೇಳಾಪಟ್ಟಿಯಲ್ಲಿ ಕೊಂಚ ವಿಳಂಬಗಳಾಗಿವೆ.
ಸುಬ್ರಹ್ಮಣ್ಯದಲ್ಲೇ ಅವರಿಂದು ಬಿಜೆಪಿ ಕಾರ್ಯಕರ್ತರ ನವಶಕ್ತಿ ಸಮಾವೇಶವನ್ನು ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.