ನವದೆಹಲಿ: ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಖಾಸಗಿ ಮತ್ತು ಅಂತಾರಾಷ್ಟ್ರೀಯ ಭಾಗಿತ್ವಕ್ಕೆ ಅವಕಾಶ ಕಲ್ಪಿಸುವ ಮಹತ್ವದ ಸುಧಾರಣಾ ನೀತಿಗೆ ಕೇಂದ್ರ ಸಂಪುಟ ಅನುಮೋದನೆಯನ್ನು ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಕ್ರಮದಿಂದಾಗಿ ಕಲ್ಲಿದ್ದಲಿನ ಲಭ್ಯತೆ ಹೆಚ್ಚಾಗಲಿದೆ ಮತ್ತು ಉದ್ಯಮಕ್ಕೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ.
ಇಷ್ಟೇ ಅಲ್ಲದೇ ಸಂಪುಟದಲ್ಲಿ ರೂ.267.11 ಕೋಟಿ ವೆಚ್ಚದ 130 ಕಿಮೀ ಉದ್ದದ ಜೇಪೋರ್-ಮಲ್ಕನ್ಗಿರಿ ನ್ಯೂ ಲೈನ್ ಪ್ರಾಜೆಕ್ಟ್ಗೂ ಅನುಮೋದನೆಯನ್ನು ನೀಡಲಾಗಿದೆ. ಈ ಭಾಗದಲ್ಲಿ ಸಕ್ರಿಯರಾಗಿರುವ ಕೆಂಪು ಉಗ್ರರನ್ನು ಹತ್ತಿಕ್ಕಲು ಈ ಯೋಜನೆ ಸಹಕಾರಿಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.