ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಭಾನುವಾರ ಮೀರತ್ನಲ್ಲಿ ‘ರಾಷ್ಟ್ರೋದಯ ಸಮ್ಮೇಳನ’ವನ್ನು ಆಯೋಜಿಸಿದ್ದು, ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇದರಲ್ಲಿ ಭಾಗಿಯಾಗಲಿದ್ದಾರೆ.
ಈ ಸಮ್ಮೇಳನದಲ್ಲಿ ಭಾಗಿಯಾಗಲು ಈಗಾಗಲೇ 2.5 ಲಕ್ಷ ಜನ ಸ್ವಯಂಸೇವಕರಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಇದು ದೇಶದ ಅತೀದೊಡ್ಡ ಸಮ್ಮೇಳನವಾಗಿ ಹೊರಹೊಮ್ಮುವ ನಿರೀಕ್ಷೆ ಇದೆ.
‘ಸಂಘದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿರುವ ಹೊಸ ತಲೆಮಾರಿನ ಯುವಕರನ್ನು ತಲುಪುವ ಸಲುವಾಗಿ ಈ ಬೃಹತ್ ಸಮ್ಮೇಳವನ್ನು ಆಯೋಜನೆಗೊಳಿಸಲಾಗಿದೆ. ಸಮವಸ್ತ್ರಧಾರಿಗಳಾಗಿ ಲಕ್ಷಾಂತರ ಜನ ಭಾಗಿಯಾಗಲಿದ್ದಾರೆ’ ಎಂದು ಆರ್ಎಸ್ಎಸ್ ಅಖಿಲ ಭಾರತ ಪ್ರಚಾರ ಪ್ರಮುಖ್ ಮನಮೋಹನ್ ವೈದ್ಯ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.