ಮಹಾರಾಷ್ಟ್ರ: ಹಾಲಿಗೆ ಕಲಬೆರಕೆ ಮಾಡುವುದು ಇನ್ನು ಮುಂದೆ ಮಹಾರಾಷ್ಟ್ರದಲ್ಲಿ ಜಾಮೀನು ರಹಿತ ಅಪರಾಧವಾಗಲಿದೆ. ಮೂರು ವರ್ಷ ಜೈಲು ಗ್ಯಾರಂಟಿಯಾಗಲಿದೆ.
ಅಲ್ಲಿನ ಆಹಾರ ಸಚಿವ ಗಿರೀಶ್ ಬಾಪತ್ ವಿಧಾನಸಭೆಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದು, ಹಾಲಿಗೆ ಕಲಬೆರಕೆ ಮಾಡಿ ಮಾರಾಟ ಮಾಡುವವರಿಗೆ 3 ವರ್ಷ ಸಜೆ ವಿಧಿಸಲಾಗುತ್ತದೆ. ಜಾಮೀನು ಪಡೆಯಲು ಅವಕಾಶವೇ ಇಲ್ಲ ಎಂದಿದ್ದಾರೆ.
ಈ ಬಗೆಗಿನ ಕಾನೂನು ಶೀಘ್ರವೇ ಜಾರಿಗೊಳ್ಳಲಿದೆ ಎಂದಿದ್ದಾರೆ.
ಪ್ರತಿಪಕ್ಷಗಳ ಸದಸ್ಯರು ಈ ಅಪರಾಧಕ್ಕೆ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದರು, ಆದರೆ ಈಗಿರುವ ಕಾನೂನಿನ ಅನ್ವಯ ಅದು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.