ನವದೆಹಲಿ: ಅಣ್ವಸ್ತ್ರ ಪ್ರಸರಣ ತಡೆಯನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದು, ಕೆಲ ನೆರೆಯ ರಾಷ್ಟ್ರಗಳ ರೀತಿ ನಮಗೆ ‘ಕೆಟ್ಟ ಬಾಂಬ್’ಗಳಲ್ಲಿ ನಂಬಿಕೆ ಇಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಹೇಳಿದ್ದಾರೆ. ಈ ಮೂಲಕ ಪಾಕಿಸ್ಥಾನಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಭಾರತ ಅಣ್ವಸ್ತ್ರ ಪ್ರಸರಣ ತಡೆ ಒಪ್ಪಂದಕ್ಕೆ ಸಹಿ ಹಾಕದಿದ್ದರೂ ಅಣ್ವಸ್ತ್ರ ಪ್ರಸರಣದ ನಿರ್ಬಂಧಗಳನ್ನು ಗಂಭೀರವಾಗಿ ಪರಿಗಣಿಸಿ ಪಾಲಿಸುತ್ತಿದೆ ಎಂದಿದ್ದಾರೆ.
‘ಅಣ್ವಸ್ತ್ರ ಪ್ರಸರಣ ತಡೆಗೆ ಬದ್ಧತೆಯಾಗಿ ನಾವು ಪರಮಾಣು ಒಪ್ಪಂದಗಳಿಗೆ ಸಹಿ ಮಾಡುತ್ತಿದ್ದೇವೆ. ಪರಮಾಣುವಿನ ಕಾನೂನು ಬಾಹಿರ ಪ್ರಸರಣವನ್ನು ನಾವು ಬೆಂಬಲಿಸುವುದಿಲ್ಲ’ ಎಂದಿದ್ದಾರೆ.
ಗಡಿಯಲ್ಲಿನ ಅಕ್ರಮ ಒಳನುಸುಳುವಿಕೆ ಕಡಿಮೆಯಾಗಿಲ್ಲ, ಹೀಗಾಗೀ ನಾವು ಎಚ್ಚರಿಕೆಯಿಂದಿದ್ದೇವೆ, ಒಳನುಸುಳುವಿಕೆಯನ್ನು ಮನೋರಂಜನಾತ್ಮಕವಾಗಿ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.