ಮಂಗಳೂರು: ಶಿಕ್ಷಣವು ಇಂದು ವ್ಯಾಪಾರೀಕರಣಗೊಂಡಿದೆ. ಇದರ ಪರಿಣಾಮವಾಗಿಯೇ ಮನುಷ್ಯತ್ವ ಎಂಬುದು ನಶಿಸಿ ಹೋಗುತ್ತಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
ಅವರು ಮಂಗಳವಾರ ವಿಟ್ಲದ ಮೈತ್ರೇಯಿ ಗುರುಕುಲದ ಅರ್ಧ ಮಂಡಲೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.
‘ವಿಶ್ವವಿದ್ಯಾನಿಲಯಗಳಲ್ಲಿ ಸ್ಮಗ್ಲಿಂಗ್ಗಳನ್ನು ಕಲಿಸೋದಿಲ್ಲ, ಆದರೂ ಸ್ಮಗ್ಲಿಂಗ್ಗಳು ಹೆಚ್ಚಾಗಿವೆ. ಶ್ರೇಷ್ಠ ವ್ಯಕ್ತಿಗಳನ್ನು ಸೃಷ್ಟಿಸುವ ವಿಶ್ವವಿದ್ಯಾಲಯಗಳ ಸಂಖ್ಯೆ ಕಡಿಮೆ ಇದೆ. ಶಿಕ್ಷಣದ ವ್ಯಾಪಾರೀಕಣದಿಂದ ಮಾನವೀಯತೆ ನಾಶವಾಗಿದೆ, ಮನುಷ್ಯತ್ವ ಕಲಿಸುವುದು ಶಿಕ್ಷಣವಾಗಬೇಕೇ ಹೊರತು ಜೀವನ ನಡೆಸುವುದಕಷ್ಟೇ ಶಿಕ್ಷಣ ಇರಬಾರದು’ ಎಂದರು.
ಬ್ರಿಟಿಷರು ತಮ್ಮ ಲಾಭಕ್ಕಾಗಿ ಅವರಿಗೆ ಬೇಕಾದ ಶಿಕ್ಷಣವನ್ನು ಇಲ್ಲಿ ಜಾರಿಗೊಳಿಸಿದರು, ಅದರಿಂದ ಲಾಭವನ್ನೂ ಪಡೆದರೂ. ಆದರೂ ಇಂದಿಗೂ ಅದೇ ಪದ್ಧತಿ ಜಾರಿಯಲ್ಲಿದೆ ಎಂದು ಬೇಸರಿಸಿದ ಅವರು, ಪ್ರಸ್ತುತ ನಮ್ಮ ಶಿಕ್ಷಣ ಪದ್ಧತಿಯನ್ನು ಪುನರ್ರಚಿಸುವ ಅಗತ್ಯತೆ ಇದೆ ಎಂದು ಪ್ರತಿಪಾದಿಸಿದರು.
ವಿದೇಶಿ ಶಿಕ್ಷಣ ಪದ್ಧತಿ ಇದ್ದಾಗಲೂ ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿಯಂತಹ ಶ್ರೇಷ್ಠರು ಸೃಷ್ಟಿಯಾಗಲು ಭಾರತೀಯ ಸಂಸ್ಕಾರವೇ ಕಾರಣ ಎಂದು ಅವರು ಹೇಳಿದರು.
ಆರ್ಟ್ ಆಫ್ ಲಿವಿಂಗ್ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ, ಆದಿ ಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿ ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.